ಬೆಂಗಳೂರಿನಲ್ಲಿ ಹೊಂಡ, ಗುಂಡಿಯ ದುರವಸ್ಥೆ 
ರಾಜ್ಯ

ಶೇ.95ರಷ್ಟು ಗುಂಡಿಗಳನ್ನು ಮುಚ್ಚಿದ್ದೇವೆ; ಬಿಬಿಎಂಪಿ ಹೇಳಿಕೆ

ನಗರದ ಹಲವು ಭಾಗಗಳ ರಸ್ತೆಗಳಲ್ಲಿ ಗುಂಡಿಗಳು ಇನ್ನೂ ಸವಾರರಿಗೆ ತೊಂದರೆಯಾಗಿದೆ ಎಂದು ...

ಬೆಂಗಳೂರು: ನಗರದ ಹಲವು ಭಾಗಗಳ ರಸ್ತೆಗಳಲ್ಲಿ ಗುಂಡಿಗಳು ಇನ್ನೂ ಸವಾರರಿಗೆ ತೊಂದರೆಯಾಗಿದೆ ಎಂದು ನಿವಾಸಿಗಳು ಹೇಳುತ್ತಿದ್ದರೆ ಇತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಹಿಂದೆ ಗುರುತಿಸಿದ 3,176 ಹೊಂಡ, ಗುಂಡಿಗಳ ಪೈಕಿ ಶೇಕಡಾ 95ರಷ್ಟು ಭರ್ತಿಯಾಗಿದೆ ಎಂದು ಹೇಳುತ್ತಿದೆ.

ಬೆಂಗಳೂರು ನಗರದಾದ್ಯಂತ ಇರುವ ಗುಂಡಿಗಳನ್ನು ಮುಚ್ಚಲು ಹೈಕೋರ್ಟ್ ಇಂದಿನವರೆಗೆ ಗಡುವು ನೀಡಿತ್ತು. ನಿನ್ನೆ ಸರ್ಕಾರಿ ರಜೆ ಆದರೂ ಕೂಡ ತಡರಾತ್ರಿಯವರೆಗೆ ಕೆಲಸ ಮಾಡಿದ್ದು ಹೈಕೋರ್ಟ್ ನೀಡಿರುವ ಗಡುವು ದಿನಾಂಕ ಪ್ರಕಾರ ನಿನ್ನೆಯೊಳಗೆ ಗುಂಡಿಗಳನ್ನು ಮುಚ್ಚಬೇಕಾಗಿತ್ತು. ಸೋಮವಾರದವರೆಗೆ ಮಳೆ ಬಾರದಿದ್ದರೆ ನಮ್ಮ ಕೆಲಸ ಮುಗಿಯುತ್ತಿತ್ತು. ಆದರೆ ಕಳೆದ ರಾತ್ರಿಯಿಂದ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಕೆಲಸಕ್ಕೆ ಅಡ್ಡಿಯಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳುತ್ತಾರೆ.

ಬೆಂಗಳೂರಿನ ಎಂಟು ವಲಯಗಳಲ್ಲಿ 3,017 ಗುಂಡಿಗಳನ್ನು ಗುರುತಿಸಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್ ಗೆ ತಿಳಿಸಿತ್ತು. ಅವುಗಳನ್ನು ಮುಚ್ಚುವ ಸಂದರ್ಭದಲ್ಲಿ 105 ಹೊಸ ಗುಂಡಿಗಳು ಪತ್ತೆಯಾಗಿವೆ. ನಿನ್ನೆ ಬಿಬಿಎಂಪಿ 3 ಸಾವಿರ ಗುಂಡಿಗಳನ್ನು ಮುಚ್ಚಿದೆ ಎಂದು ಹೇಳಿದೆ. ನಾವು ಹೈಕೋರ್ಟ್ ನ ಆದೇಶಕ್ಕೆ ತಲೆಬಾಗಿದ್ದು ನಮ್ಮ ಬದ್ಧತೆಯನ್ನು ಉಳಿಸಿಕೊಂಡಿದ್ದೇವೆ. ನಿನ್ನೆಯವರೆಗೆ ಮಳೆಯಿಲ್ಲದ್ದು ನಮಗೆ ನೆರವಾಯಿತು ಎನ್ನುತ್ತಾರೆ ಮೇಯರ್ ಸಂಪತ್ ರಾಜ್.

ಇಂದು ಮಧ್ಯರಾತ್ರಿಯಿಂದಲೇ ಮಳೆ ಸುರಿಯುತ್ತಿರುವುದರಿಂದ ನಾಳೆಯಿಂದ ಮತ್ತೆ ಗುಂಡಿ ಮುಚ್ಚುವ ಕಾರ್ಯ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

2015ರಲ್ಲಿ ಕೋರಮಂಗಲದ ನಾಲ್ವರು ನಿವಾಸಿಗಳು ಸಲ್ಲಿಸಿದ ಅರ್ಜಿ ಸಂಬಂಧ ಕಳೆದ ಬುಧವಾರ ಆದೇಶ ನೀಡಿದ್ದ ಹೈಕೋರ್ಟ್ ಮರುದಿನವೇ ಗುಂಡಿಗಳೆಲ್ಲವನ್ನೂ ಮುಚ್ಚಬೇಕು ಎಂದು ಹೇಳಿತ್ತು. ಅಲ್ಲದೆ ಬಿಬಿಎಂಪಿ ಮೇಲೆ ಛೀಮಾರಿ ಹಾಕಿದ್ದ ಹೈಕೋರ್ಟ್ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕಚೇರಿಯನ್ನೇ ಮುಚ್ಚಿ ಎಂದು ಹೇಳಿದ್ದರು. ರಸ್ತೆಯ ಗುಂಡಿ ಮುಚ್ಚಿದ ಕಾಮಗಾರಿ ಮಾಡಿದ ಕಾಂಟ್ರಾಕ್ಟರ್ ಮತ್ತು ಎಂಜಿನಿಯರ್ ಗಳ ಹೆಸರು ಕೊಡಿ ಎಂದು ಕೂಡ ನ್ಯಾಯಾಲಯ ಹೇಳಿತ್ತು. ನಂತರ ನ್ಯಾಯಾಲಯ ಕಳೆದ ಗುರುವಾರ ಗುಂಡಿ ಮುಚ್ಚುವ ಅವಧಿಯನ್ನು ಇಂದಿಗೆ ಮುಂದೂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT