ಬೆಂಗಳೂರಿನಲ್ಲಿ ಹೊಂಡ, ಗುಂಡಿಯ ದುರವಸ್ಥೆ 
ರಾಜ್ಯ

ಶೇ.95ರಷ್ಟು ಗುಂಡಿಗಳನ್ನು ಮುಚ್ಚಿದ್ದೇವೆ; ಬಿಬಿಎಂಪಿ ಹೇಳಿಕೆ

ನಗರದ ಹಲವು ಭಾಗಗಳ ರಸ್ತೆಗಳಲ್ಲಿ ಗುಂಡಿಗಳು ಇನ್ನೂ ಸವಾರರಿಗೆ ತೊಂದರೆಯಾಗಿದೆ ಎಂದು ...

ಬೆಂಗಳೂರು: ನಗರದ ಹಲವು ಭಾಗಗಳ ರಸ್ತೆಗಳಲ್ಲಿ ಗುಂಡಿಗಳು ಇನ್ನೂ ಸವಾರರಿಗೆ ತೊಂದರೆಯಾಗಿದೆ ಎಂದು ನಿವಾಸಿಗಳು ಹೇಳುತ್ತಿದ್ದರೆ ಇತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಹಿಂದೆ ಗುರುತಿಸಿದ 3,176 ಹೊಂಡ, ಗುಂಡಿಗಳ ಪೈಕಿ ಶೇಕಡಾ 95ರಷ್ಟು ಭರ್ತಿಯಾಗಿದೆ ಎಂದು ಹೇಳುತ್ತಿದೆ.

ಬೆಂಗಳೂರು ನಗರದಾದ್ಯಂತ ಇರುವ ಗುಂಡಿಗಳನ್ನು ಮುಚ್ಚಲು ಹೈಕೋರ್ಟ್ ಇಂದಿನವರೆಗೆ ಗಡುವು ನೀಡಿತ್ತು. ನಿನ್ನೆ ಸರ್ಕಾರಿ ರಜೆ ಆದರೂ ಕೂಡ ತಡರಾತ್ರಿಯವರೆಗೆ ಕೆಲಸ ಮಾಡಿದ್ದು ಹೈಕೋರ್ಟ್ ನೀಡಿರುವ ಗಡುವು ದಿನಾಂಕ ಪ್ರಕಾರ ನಿನ್ನೆಯೊಳಗೆ ಗುಂಡಿಗಳನ್ನು ಮುಚ್ಚಬೇಕಾಗಿತ್ತು. ಸೋಮವಾರದವರೆಗೆ ಮಳೆ ಬಾರದಿದ್ದರೆ ನಮ್ಮ ಕೆಲಸ ಮುಗಿಯುತ್ತಿತ್ತು. ಆದರೆ ಕಳೆದ ರಾತ್ರಿಯಿಂದ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಕೆಲಸಕ್ಕೆ ಅಡ್ಡಿಯಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳುತ್ತಾರೆ.

ಬೆಂಗಳೂರಿನ ಎಂಟು ವಲಯಗಳಲ್ಲಿ 3,017 ಗುಂಡಿಗಳನ್ನು ಗುರುತಿಸಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್ ಗೆ ತಿಳಿಸಿತ್ತು. ಅವುಗಳನ್ನು ಮುಚ್ಚುವ ಸಂದರ್ಭದಲ್ಲಿ 105 ಹೊಸ ಗುಂಡಿಗಳು ಪತ್ತೆಯಾಗಿವೆ. ನಿನ್ನೆ ಬಿಬಿಎಂಪಿ 3 ಸಾವಿರ ಗುಂಡಿಗಳನ್ನು ಮುಚ್ಚಿದೆ ಎಂದು ಹೇಳಿದೆ. ನಾವು ಹೈಕೋರ್ಟ್ ನ ಆದೇಶಕ್ಕೆ ತಲೆಬಾಗಿದ್ದು ನಮ್ಮ ಬದ್ಧತೆಯನ್ನು ಉಳಿಸಿಕೊಂಡಿದ್ದೇವೆ. ನಿನ್ನೆಯವರೆಗೆ ಮಳೆಯಿಲ್ಲದ್ದು ನಮಗೆ ನೆರವಾಯಿತು ಎನ್ನುತ್ತಾರೆ ಮೇಯರ್ ಸಂಪತ್ ರಾಜ್.

ಇಂದು ಮಧ್ಯರಾತ್ರಿಯಿಂದಲೇ ಮಳೆ ಸುರಿಯುತ್ತಿರುವುದರಿಂದ ನಾಳೆಯಿಂದ ಮತ್ತೆ ಗುಂಡಿ ಮುಚ್ಚುವ ಕಾರ್ಯ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

2015ರಲ್ಲಿ ಕೋರಮಂಗಲದ ನಾಲ್ವರು ನಿವಾಸಿಗಳು ಸಲ್ಲಿಸಿದ ಅರ್ಜಿ ಸಂಬಂಧ ಕಳೆದ ಬುಧವಾರ ಆದೇಶ ನೀಡಿದ್ದ ಹೈಕೋರ್ಟ್ ಮರುದಿನವೇ ಗುಂಡಿಗಳೆಲ್ಲವನ್ನೂ ಮುಚ್ಚಬೇಕು ಎಂದು ಹೇಳಿತ್ತು. ಅಲ್ಲದೆ ಬಿಬಿಎಂಪಿ ಮೇಲೆ ಛೀಮಾರಿ ಹಾಕಿದ್ದ ಹೈಕೋರ್ಟ್ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕಚೇರಿಯನ್ನೇ ಮುಚ್ಚಿ ಎಂದು ಹೇಳಿದ್ದರು. ರಸ್ತೆಯ ಗುಂಡಿ ಮುಚ್ಚಿದ ಕಾಮಗಾರಿ ಮಾಡಿದ ಕಾಂಟ್ರಾಕ್ಟರ್ ಮತ್ತು ಎಂಜಿನಿಯರ್ ಗಳ ಹೆಸರು ಕೊಡಿ ಎಂದು ಕೂಡ ನ್ಯಾಯಾಲಯ ಹೇಳಿತ್ತು. ನಂತರ ನ್ಯಾಯಾಲಯ ಕಳೆದ ಗುರುವಾರ ಗುಂಡಿ ಮುಚ್ಚುವ ಅವಧಿಯನ್ನು ಇಂದಿಗೆ ಮುಂದೂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT