ಡಾ. ರಾಜ್ ಕುಮಾರ್ ಜೊತೆ ಕಾಡುಗಳ್ಳ ವೀರಪ್ಪನ್ 
ರಾಜ್ಯ

ವರನಟ ಡಾ.ರಾಜ್ ಕುಮಾರ್ ಕಿಡ್ನಾಪ್ ಕೇಸ್: 9 ಆರೋಪಿಗಳು ಖುಲಾಸೆ

ಕಾಡುಗಳ್ಳ ವೀರಪ್ಪನ್ ವರನಟ ಡಾ. ರಾಜ್​ಕುಮಾರ್​ ಅವರನ್ನು​ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದಿದ್ದು.

ಈರೋಡ್:  ಕಾಡುಗಳ್ಳ ವೀರಪ್ಪನ್ ವರನಟ ಡಾ. ರಾಜ್​ಕುಮಾರ್​ ಅವರನ್ನು​ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದಿದ್ದು. ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿ ಈರೋಡ್​ನ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. 
ಆರೋಪ ಸಾಬೀತುಪಡಿಸವಲ್ಲಿ ಪ್ರಾಸಿಕ್ಯೂಷನ್​​ ವಿಫಲವಾದ ಕಾರಣ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್​ತೀರ್ಪು ಪ್ರಕಟಿಸಿದೆ.
2000 ಇಸವಿಯ ಜುಲೈ 30 ರಂದು, ಗಾಜನೂರಿನ ತೋಟದ ಮನೆಯಿಂದ ಡಾ.ರಾಜ್ ಅವರನ್ನು, ವೀರಪ್ಪನ್ ​ಮತ್ತವರ ತಂಡ ಅಪಹರಿಸಿತ್ತು. 3 ತಿಂಗಳ ಕಾಲ ರಾಜ್​ ಅವರನ್ನು ಸತ್ಯಮಂಗಳಂ ಹಾಗೂ ಭವಾನಿ ಕಾಡಿನಲ್ಲಿ ಇರಿಸಿಕೊಳ್ಳಲಾಗಿತ್ತು.
ತಮಿಳು ಮ್ಯಾಗಜೀನ್​ನಕ್ಕೀರನ್​ನ ಪತ್ರಕರ್ತ ಆರ್​ಆರ್​​ ಗೋಪಾಲ್​ ನೇತೃತ್ವದಲ್ಲಿ 6 ಸುತ್ತುಗಳ ಮಾತುಕತೆಯ ಬಳಿಕ ಕೊನೆಗೂ 108 ದಿನಗಳ ಬಳಿಕ ರಾಜ್​ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಬಿಡುಗಡೆ ಮಾಡಿದ್ದ.
ಈ ಸೆನ್ಸೇಷನಲ್ ​​ಕೇಸ್​​ನಲ್ಲಿ ವೀರಪ್ಪನ್​ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರಲ್ಲಿ ವೀರಪ್ಪನ್​, ಸೇತುಕುಡಿ ಗೋವಿಂದನ್​ ಹಾಗೂ ರಂಗಸಾಮಿ ವಿಚಾರಣೆ ವೇಳೆಯೇ ಸಾವನ್ನಪ್ಪಿದ್ದಾರೆ. 
ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನ ನ್ಯಾಯಾಲಯ ಈ ಕುರಿತು ಇಂದು ತೀರ್ಪು ಪ್ರಕಟಿಸಿದ್ದು. ಐವರು ಆರೋಪಿಗಳಾದ ಗೋವಿಂದರಾಜ್​, ಅನಂತಿಲ್, ಪುಸವಣ್ಣ, ಕುಪ್ಪಸ್ವಾಮಿ ಮತ್ತಿತ್ತರನ್ನು ಖುಲಾಸೆಗೊಳಿಸಿ ಅಂತಿಮ ತೀರ್ಪು ನೀಡಿದೆ.
2000 ಜುಲೈ 30ರಂದು ಈರೋಡ್​ನ ದೊಡ್ಡಗಾಜನೂರಿನ ರಾಜ್​ಕುಮಾರ್​ ಅವರ ತೋಟದ ಮನೆಯಿಂದ ಹಣಕ್ಕಾಗಿ ಕಾಡುಗಳ್ಳ ವೀರಪ್ಪನ್​ ಅಪಹರಿಸಿದ್ದ. ಹಣದ ಬೇಡಿಕೆಯಿಟ್ಟು ಅವರನ್ನು 108 ದಿನಗಳ ಕಾಲ ಕಾಡಿನಲ್ಲಿಯೇ ​ ಕಾಲ ಕಳೆಯುವಂತೆ ಮಾಡಿದ್ದ. ಅಪರಹರಣದ ವೇಳೆ ರಾಜ್ ಕುಮಾರ್ ಅವರ ಜೊತೆ ಪತ್ನಿ ಪಾರ್ವತಮ್ಮ ಇದ್ದರು. 

ರಾಜ್ ಕುಮಾರ್ ಅವರನ್ನು ಕಿಡ್ನಾಪ್ ಮಾಡಿದ್ದ ವೀರಪ್ಪನ್ ಬೆಂಗಳೂರಿನಲ್ಲಿ ತಿರುವಲ್ಲೂವರ್ ಪ್ರತಿಮೆ ಸ್ಠಾಪನೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದ. ಈ ಸಂಬಂಧ ತಾಳವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 2004 ರಲ್ಲಿ ಧರ್ಮಪುರಿಯಲ್ಲಿ ಎಸ್ ಟಿ ಎಫ್  ತಂಡ  ವೀರಪ್ಪನ್ ನನ್ನು ಗುಂಡಿಟ್ಟು ಹತ್ಯೆ ಮಾಡಿತ್ತು.18 ವರ್ಷ 2 ತಿಂಗಳ ಬಳಿಕ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ತೀರ್ಪು ನೀಡಿದೆ,

7 ವರ್ಷಗಳ ಹಿಂದೆ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು , ಸುಮಾರು 10 ಮಂದಿ ನ್ಯಾಯಾಧೀಶರು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT