ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅನಾಹುತ, ಅಪಾರ ಪ್ರಮಾಣದ ಸ್ವತ್ತು ನಾಶ

ಮಂಗಳೂರು ನಗರದ ಶಾಪಿಂಗ್ ಮಾಲ್ ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಸ್ವತ್ತು ನಾಶವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಮಂಗಳುರು: ಮಂಗಳೂರು ನಗರದ ಶಾಪಿಂಗ್ ಮಾಲ್ ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಸ್ವತ್ತು ನಾಶವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಮಂಗಳೂರಿನ ಗಣಪತಿ ಹೈಸ್ಕೂಲ್ ರಸ್ತೆಯ ಅಗ್ನಿ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯಿಂದ ಎರಡು ಮಳಿಗೆಗಳು ಸಂಪೂರ್ಣ ಸುಟ್ಟು ಹೋಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವ ಪ್ರಾಣಹಾನಿ ಸಂಭವಿಸಲಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಬವಿಸಿದೆ ಎನ್ನಲಾಗಿದ್ದು  ಸೆಲೆಕ್ಷನ್‌ ಸೆಂಟರ್‌ ಮತ್ತು ಕಾಮತ್‌ ಕೋ  ಮಳಿಗೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಅವಘಡದ ಮಾಹಿತಿ ತಿಳಿದ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ತಹಬಂದಿಗೆ ತಂದಿದೆ.
ಘಟನಾ ಸ್ಥಳಕ್ಕೆ ಮೇಯರ್‌ ಭಾಸ್ಕರ್‌ ಮೊಯಿಲಿ, ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌,ಡಿಸಿಪಿ ಉಮಾ ಪ್ರಶಾಂತ್‌ ,ಮೊದಲಾದವರು ಆಗಮಿಸಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT