ಮಹದಾಯಿ ನದಿ ನೀರು ಕುಡಿಯುತ್ತಿರುವ ಸಚಿವ ಡಿ ಕೆ ಶಿವಕುಮಾರ್ 
ರಾಜ್ಯ

ಮಹದಾಯಿ ನದಿ ನೀರಿಗೆ ಹೋರಾಟ ಮುಂದುವರಿಯಲಿದೆ: ಡಿ ಕೆ ಶಿವಕುಮಾರ್

ಮಹದಾಯಿ ನ್ಯಾಯಾಧಿಕರಣ ನೀಡಿದ ತೀರ್ಪಿನಲ್ಲಿ ನೀರು ಹಂಚಿಕೆ ವಿಷಯವಾಗಿ ರಾಜ್ಯಕ್ಕೆ ...

ಬೆಳಗಾವಿ/ಹುಬ್ಬಳ್ಳಿ: ಮಹದಾಯಿ ನ್ಯಾಯಾಧಿಕರಣ ನೀಡಿದ ತೀರ್ಪಿನಲ್ಲಿ ನೀರು ಹಂಚಿಕೆ ವಿಷಯವಾಗಿ ರಾಜ್ಯಕ್ಕೆ ಸಿಗಬೇಕಾದ ನ್ಯಾಯ ಸಿಕ್ಕಿಲ್ಲ. ಮಹದಾಯಿ ನೀರು ಹಂಚಿಕೆ ವಿವಾದ ನ್ಯಾಯಾಧೀಕರಣ ತೀರ್ಪಿನಿಂದ ಸಮಾಧಾನವಾಗಿಲ್ಲ, ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಕಳಸಾ ನಾಲಾ ಪ್ರದೇಶಕ್ಕೆ ಭೇಟಿ ನೀಡಿದ ಅವರು ಕಾಮಗಾರಿಯ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಆದರೆ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಮೊರೆ ಹೋಗಲಿದೆಯೇ ಎಂಬ ಬಗ್ಗೆ ಸ್ಪಷ್ಟವಾಗಿ ಉತ್ತರಿಸಲಿಲ್ಲ. ಮಹದಾಯಿ ನ್ಯಾಯಾಧಿಕರಣ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ.

ನಮಗೆ ಈ ತೀರ್ಪು ಸಮಾಧಾನ ತಂದಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಸ್ಪಷ್ಟವಾಗಿ ಹೇಳಿದೆ.  ನಾವು ನ್ಯಾಯಾಧಿಕರಣದಿಂದ ಬಹಳಷ್ಟು ನಿರೀಕ್ಷೆ ಮಾಡಿದ್ದೆವು. ಮಹದಾಯಿ ನದಿ ವ್ಯಾಪ್ತಿಯ ಒಟ್ಟು 188.6 ಟಿಎಂಸಿ ನೀರಿನಲ್ಲಿ 48 ಟಿಎಂಸಿ ನೀರನ್ನು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಕರ್ನಾಟಕವು ಕಳಸಾ-ಬಂಡೂರಿಯಿಂದ 7.56 ಟಿಎಂಸಿ ನೀರು ಕೇಳಿತ್ತು. ಆದರೆ, 3.90 ಟಿಎಂಸಿ ಹಂಚಿಕೆಯಾಗಿದೆ.ಇದಕ್ಕೆ ಇನ್ನೂ ಒಂದೂವರೆ ತಿಂಗಳ ಕಾಲಾವಕಾಶ ಇದೆ. ಅಷ್ಟರಲ್ಲಿ ಕಾನೂನು ಹಾಗೂ ನೀರಾವರಿ ತಜ್ಞರ ಜೊತೆ ಸಮಾಲೋಚನೆ ನಡೆಸಿ ಮೇಲ್ಮನವಿ ಸಲ್ಲಿಸುವ ಕುರಿತು ತೀರ್ಮಾನ ಮಾಡಲಾಗುವುದು ಎಂದಷ್ಟೇ ಹೇಳಿದರು.

ಕರ್ನಾಟಕ 36.55 ಟಿಎಂಸಿ ಅಡಿ ನೀರನ್ನು ಕೇಳಿದ್ದು ಅದರಲ್ಲಿ 13.42 ಟಿಎಎಂಸಿ ಅಡಿ ನೀರು ಮಾತ್ರ ಸಿಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT