ರಾಜ್ಯ

ಅಪಹರಣ, ಹಲ್ಲೆ ಪ್ರಕರಣ: ದುನಿಯಾ ವಿಜಯ್ ಗೆ ಸೆಷನ್ಸ್ ಕೋರ್ಟ್ ನಲ್ಲೂ ಹಿನ್ನಡೆ

Srinivas Rao BV
ಬೆಂಗಳೂರು: ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಜಾಮೀನು ಪಡೆಯಲು ಯತ್ನಿಸುತ್ತಿರುವ ನಟ ದುನಿಯಾ ವಿಜಯ್ ಗೆ ಸೆಷನ್ಸ್ ಕೋರ್ಟ್ ನಲ್ಲೂ ಹಿನ್ನಡೆಯುಂಟಾಗಿದೆ. 
ಸೆ.26 ರಂದು ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಈ ಬಳಿಕ ದುನಿಯಾ ವಿಜಯ್, ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ಸೆ.27 ರಂದು ಅರ್ಜಿಯನ್ನು ಕೈಗೆತ್ತಿಕೊಂಡಿರುವ ಸೆಷನ್ಸ್ ಕೋರ್ಟ್, ಜಾಮೀನು ಅರ್ಜಿ ವಿಚಾರಣೆಯನ್ನು ಸೆ.29 ಕ್ಕೆ ಮುಂದೂಡಿದ್ದು, ಆಕ್ಷೇಪಣೆಗಳ್ದಿದರೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚನೆ ನೀಡಿದೆ. 
SCROLL FOR NEXT