ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು; ಭದ್ರತಾ ಸಿಬ್ಬಂದಿಗಳ ಹತ್ಯೆ, ಶಂಕಿತ ನಾಪತ್ತೆ

ನಗರದ ಹುಳಿಮಾವು ವ್ಯಾಪ್ತಿಯ ತೇಜಸ್ವಿನಿ ನಗರದ ಅಭಿವೃದ್ಧಿ ಹಂತದಲ್ಲಿರುವ ಖಾಸಗಿ ಲೇ ಔಟ್ ನಲ್ಲಿ ...

ಬೆಂಗಳೂರು:  ನಗರದ ಹುಳಿಮಾವು ವ್ಯಾಪ್ತಿಯ ತೇಜಸ್ವಿನಿ ನಗರದ ಅಭಿವೃದ್ಧಿ ಹಂತದಲ್ಲಿರುವ ಖಾಸಗಿ ಲೇ ಔಟ್ ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಕೊಲೆಯಾದ ಘಟನೆ ನಡೆದಿದೆ. ಘಟನೆ ಬಳಿಕ ತಲೆಮರೆಸಿಕೊಂಡಿರುವ ಮೂರನೇ ಭದ್ರತಾ ಸಿಬ್ಬಂದಿಯ ಪಾತ್ರ ಈ ಕೊಲೆಯಲ್ಲಿ ಇರಬಹುದು ಎಂದು ನಂಬಲಾಗಿದೆ. ಕೊಲೆಗೆ ಕಾರಣವೇನು ಎಂದು ಇನ್ನೂ ತಿಳಿದುಬಂದಿಲ್ಲ.

ಮೃತ ಭದ್ರತಾ ಸಿಬ್ಬಂದಿಯನ್ನು 25 ವರ್ಷದ ಸೈದುಲ್ಲಾ ಮತ್ತು 26 ವರ್ಷದ ಬಿಕ್ರಮ್ ಎಂದು ಗುರುತಿಸಲಾಗಿದೆ. ಇಬ್ಬರೂ ಅಸ್ಸಾಂ ಮೂಲದವರಾಗಿದ್ದು ಕಳೆದ ಎರಡು ಮೂರು ತಿಂಗಳಿನಿಂದ ಖಾಸಗಿ ಲೇ ಔಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶಂಕಿತ ಅಜಿತ್ ಬ್ರಹ್ಮ ಮೊನ್ನೆ ಮಂಗಳವಾರವಷ್ಟೇ ಕೆಲಸಕ್ಕೆ ಸೇರಿದ್ದ.

ನಿನ್ನೆ ಬೆಳಗ್ಗೆ ಸುಮಾರು 7 ಗಂಟೆಗೆ ಕಾರ್ಮಿಕರು ಲೇ ಔಟ್ ಗೆ ಕೆಲಸಕ್ಕೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಭದ್ರತಾ ಸಿಬ್ಬಂದಿ ಕೊಠಡಿಯಲ್ಲಿ ಇಬ್ಬರ ಶವ ಪತ್ತೆಯಾಯಿತು. ನಿವೇಶನದ ಮ್ಯಾನೇಜರ್ ಗೆ ವಿಷಯ ತಲುಪಿಸಿದರು. ಅವರು ಕೂಡಲೇ ಪೊಲೀಸರಿಗೆ ದೂರು ನೀಡಿದರು. ಕಬ್ಬಿಣದ ಸಲಾಕೆಯಿಂದ ಹೊಡೆದು ಇಬ್ಬರನ್ನೂ ಹತ್ಯೆ ಮಾಡಲಾಗಿದ್ದು ಅದನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.

ಮೂವರು ಭದ್ರತಾ ಸಿಬ್ಬಂದಿ ಕೂಡ ಕಳೆದ ಮಂಗಳವಾರ ರಾತ್ರಿ ಪಾಳಿಯ ಡ್ಯೂಟಿಯಲ್ಲಿದ್ದರು. ಅಜಿತ್ ತಪ್ಪಿಸಿಕೊಂಡಿದ್ದಾನೆ. ಆತನನ್ನು ಪತ್ತೆಹಚ್ಚಲು ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT