ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ 
ರಾಜ್ಯ

ನಕ್ಸಲ್, ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ದಕ್ಷಿಣ ರಾಜ್ಯಗಳ ಪೊಲೀಸರ ಸಮನ್ವಯತೆ ಅಗತ್ಯ- ಪರಮೇಶ್ವರ್ !

ಭಯೋತ್ಪಾದನೆ ಹಾಗೂ ನಕ್ಸಲ್ ಸಂಬಂಧಿತ ಚಟುವಟಿಕೆಗಳ ನಿಯಂತ್ರಣಕ್ಕಾಗಿ ದಕ್ಷಿಣ ಪ್ರಾಂತೀಯ ಪೊಲೀಸರ ನಡುವೆ ಉತ್ತಮ ಸಮನ್ವಯತೆ ಇರಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ಭಯೋತ್ಪಾದನೆ ಹಾಗೂ ನಕ್ಸಲ್ ಸಂಬಂಧಿತ ಚಟುವಟಿಕೆಗಳ ನಿಯಂತ್ರಣಕ್ಕಾಗಿ ದಕ್ಷಿಣ ಪ್ರಾಂತೀಯ ಪೊಲೀಸರ ನಡುವೆ ಉತ್ತಮ ಸಮನ್ವಯತೆ ಇರಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ದಕ್ಷಿಣ  ರಾಜ್ಯಗಳ ಪ್ರಾದೇಶಿಕ ಪೊಲೀಸರ ಸಮನ್ವಯತೆ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಗಳ ನಡುವೆ ಸಮರ್ಪಕ ಸಮನ್ವಯತೆ ಇಲ್ಲದಿದ್ದರೆ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದರು.

ಸೈಬರ್ ಅಪರಾಧ, ಮಾದಕ ವಸ್ತು, ಮಾನವ ಕಳ್ಳಸಾಗಣೆಗೆ ಎಲ್ಲೆ ಇಲ್ಲ. ಮಾಹಿತಿ ಹಾಗೂ ಗುಪ್ತಚರದ ಮೂಲಕ  ಸಮನ್ವಯತೆ ಸಾಧಿಸಿ ಕಾನೂನು ರಕ್ಷಿಸಬೇಕಾಗದ ಅಗತ್ಯತೆ  ಹೆಚ್ಚಾಗಿದೆ. ಪೊಲೀಸರ ಕೆಲಸ ಹಾಗೂ ಜೀವನಮಟ್ಟವನ್ನು ಸುಧಾರಿಸಬೇಕಾಗಿದೆ ಎಂದು ಹೇಳಿದರು.

 ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬರ್, ಲಕ್ಷದ್ವೀಪಗಳ ಐಜಿ ಡಿಜಿಪಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಒಂದು ತಿಂಗಳಿಗೆ ಒಂದು ಬಾರಿ ಪ್ರಾದೇಶಿಕ ಪೊಲೀಸ್ ಸಮನ್ವಯ ಸಮಿತಿ ಸಭೆ ಸೇರಲಿದ್ದು,  ಅಂತರಾಜ್ಯಕ್ಕೆ ಸಂಬಂಧಿಸಿದಂತೆ ಅಪರಾಧಗಳು, ನಕ್ಸಲ್, ಗಡಿ ವಿವಾದ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel