ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ 
ರಾಜ್ಯ

ನಕ್ಸಲ್, ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ದಕ್ಷಿಣ ರಾಜ್ಯಗಳ ಪೊಲೀಸರ ಸಮನ್ವಯತೆ ಅಗತ್ಯ- ಪರಮೇಶ್ವರ್ !

ಭಯೋತ್ಪಾದನೆ ಹಾಗೂ ನಕ್ಸಲ್ ಸಂಬಂಧಿತ ಚಟುವಟಿಕೆಗಳ ನಿಯಂತ್ರಣಕ್ಕಾಗಿ ದಕ್ಷಿಣ ಪ್ರಾಂತೀಯ ಪೊಲೀಸರ ನಡುವೆ ಉತ್ತಮ ಸಮನ್ವಯತೆ ಇರಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ಭಯೋತ್ಪಾದನೆ ಹಾಗೂ ನಕ್ಸಲ್ ಸಂಬಂಧಿತ ಚಟುವಟಿಕೆಗಳ ನಿಯಂತ್ರಣಕ್ಕಾಗಿ ದಕ್ಷಿಣ ಪ್ರಾಂತೀಯ ಪೊಲೀಸರ ನಡುವೆ ಉತ್ತಮ ಸಮನ್ವಯತೆ ಇರಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ದಕ್ಷಿಣ  ರಾಜ್ಯಗಳ ಪ್ರಾದೇಶಿಕ ಪೊಲೀಸರ ಸಮನ್ವಯತೆ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಗಳ ನಡುವೆ ಸಮರ್ಪಕ ಸಮನ್ವಯತೆ ಇಲ್ಲದಿದ್ದರೆ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದರು.

ಸೈಬರ್ ಅಪರಾಧ, ಮಾದಕ ವಸ್ತು, ಮಾನವ ಕಳ್ಳಸಾಗಣೆಗೆ ಎಲ್ಲೆ ಇಲ್ಲ. ಮಾಹಿತಿ ಹಾಗೂ ಗುಪ್ತಚರದ ಮೂಲಕ  ಸಮನ್ವಯತೆ ಸಾಧಿಸಿ ಕಾನೂನು ರಕ್ಷಿಸಬೇಕಾಗದ ಅಗತ್ಯತೆ  ಹೆಚ್ಚಾಗಿದೆ. ಪೊಲೀಸರ ಕೆಲಸ ಹಾಗೂ ಜೀವನಮಟ್ಟವನ್ನು ಸುಧಾರಿಸಬೇಕಾಗಿದೆ ಎಂದು ಹೇಳಿದರು.

 ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬರ್, ಲಕ್ಷದ್ವೀಪಗಳ ಐಜಿ ಡಿಜಿಪಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಒಂದು ತಿಂಗಳಿಗೆ ಒಂದು ಬಾರಿ ಪ್ರಾದೇಶಿಕ ಪೊಲೀಸ್ ಸಮನ್ವಯ ಸಮಿತಿ ಸಭೆ ಸೇರಲಿದ್ದು,  ಅಂತರಾಜ್ಯಕ್ಕೆ ಸಂಬಂಧಿಸಿದಂತೆ ಅಪರಾಧಗಳು, ನಕ್ಸಲ್, ಗಡಿ ವಿವಾದ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT