ಪ್ರಶಸ್ತಿ ಪ್ರದಾನ ಚಿತ್ರ 
ರಾಜ್ಯ

ಮಕ್ಕಳ ರಕ್ಷಣೆ ಪ್ರಯತ್ನಕ್ಕೆ ರಾಷ್ಟ್ರೀಯ ಪ್ರಶಸ್ತಿ: ರೈಲ್ವೆ ಪೊಲೀಸ್ ಅಧಿಕಾರಿಗೆ ಅತ್ಯುನ್ನತ ಗೌರವ !

ನೈರುತ್ಯ ರೈಲ್ವೆ ಆವರಣವೊಂದರಲ್ಲಿಯೇ 2017-18 ನೇ ಸಾಲಿನಲ್ಲಿ ಸುಮಾರು 1,100 ಮಕ್ಕಳನ್ನು ರಕ್ಷಣೆ ಮಾಡಿದ್ದ ರೈಲ್ವೆ ಸುರಕ್ಷತಾ ಪಡೆ ( ಆರ್ ಪಿಎಫ್ ) ಭದ್ರತಾ ಆಯುಕ್ತೆ ದೆಬಾಸ್ಮಿತಾ ಚಟ್ಟೋಪಾದ್ಯಾಯ ಬ್ಯಾನರ್ಜಿ ಅವರಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ಸಂದಿದೆ.

ಬೆಂಗಳೂರು: ನೈರುತ್ಯ ರೈಲ್ವೆ ಆವರಣವೊಂದರಲ್ಲಿಯೇ 2017-18 ನೇ ಸಾಲಿನಲ್ಲಿ ಸುಮಾರು 1,100 ಮಕ್ಕಳನ್ನು  ರಕ್ಷಣೆ ಮಾಡಿದ್ದ  ರೈಲ್ವೆ ಸುರಕ್ಷತಾ ಪಡೆ ( ಆರ್ ಪಿಎಫ್ ) ಭದ್ರತಾ ಆಯುಕ್ತೆ   ದೆಬಾಸ್ಮಿತಾ ಚಟ್ಟೋಪಾದ್ಯಾಯ ಬ್ಯಾನರ್ಜಿ ಅವರಿಗೆ ರಾಷ್ಟ್ರ ಮಟ್ಟದ  ಪ್ರಶಸ್ತಿ  ಸಂದಿದೆ.

ಆರ್ ಪಿಎಫ್ ಮಹಾನಿರ್ದೇಶಕ ಧರ್ಮೇಂದ್ರ ಕುಮಾರ್ ಪದಕ ಹಾಗೂ  ಪ್ರಶಸ್ತಿ ಪತ್ರವನ್ನು   ದೆಬಾಸ್ಮಿತಾ ಚಟ್ಟೋಪಾದ್ಯಾಯ ಬ್ಯಾನರ್ಜಿ ಅವರಿಗೆ ಪ್ರದಾನ ಮಾಡಿದರು.

ದೇಶದಲ್ಲಿಯೇ ಇದೊಂದು ತಂಡ ಮಾತ್ರ ಮಕ್ಕಳ ರಕ್ಷಣೆಯಲ್ಲಿ ತೊಡಗಿಸಿಕೊಂಡಿದೆ. ರೈಲ್ವೆ ನಿಲ್ದಾಣಗಳಲ್ಲಿ ಮನೆಯಿಂದ ಹೊರಗೆ ಓಡಿಬಂದ ನಿರ್ಗತಿಕ  ಮಕ್ಕಳನ್ನು ರಕ್ಷಿಸುತ್ತಿದೆ.

 28 ವರ್ಷದ ಬ್ಯಾನರ್ಜಿ ಯಲಹಂಕದ ರೈಲು ಗಾಲಿ ಕಾರ್ಖಾನೆಯಲ್ಲಿ ಡಿಎಸ್ ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದು, ರಾಷ್ಟ್ರಮಟ್ಟದ ಪ್ರಶಸ್ತಿ ಸಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಅಸಂಖ್ಯಾತ ಸಂಖ್ಯೆಯ ಮಕ್ಕಳು ಬೆಂಗಳೂರಿಗೆ ಬರುತ್ತಿದ್ದು, ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ರೈಲ್ವೆ ನಿಲ್ದಾಣಗಳಲ್ಲಿನ ಸಿಸಿಟಿವಿಗಳಲ್ಲಿ  ಮುಖವನ್ನು ಗುರುತಿಸಬಲ್ಲಂತಹ ಸಾಪ್ಟ್ ವೇರ್ ಅಳವಡಿಸಲಾಗಿದ್ದು, ಈ ತಂತ್ರಜ್ಞಾನದ ಮೂಲಕ  ಮೂಲಕ ನಿರ್ಗತಿಕ ಮಹಿಳೆ ಹಾಗೂ ಮಕ್ಕಳಿಗೆ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT