ತಿರುಚಂದೂರು ದೇವಾಲಯದಲ್ಲಿ ಸಿಎಂ ಕುಮಾರಸ್ವಾಮಿ ಕುಟುಂಬ 
ರಾಜ್ಯ

4 ತಿಂಗಳಲ್ಲಿ 40 ದೇಗುಲ ಯಾತ್ರೆ: ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಹಿಂದಿನ ರಹಸ್ಯವೇನು?

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ದೇಗುಲ ಯಾತ್ರೆ ಇನ್ನೂ ಮುಗಿದಿಲ್ಲ, ನಿನ್ನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿರುವ ತಿರುಚೆಂದರ್ ನಲ್ಲಿರುವ ...

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ದೇಗುಲ ಯಾತ್ರೆ ಇನ್ನೂ ಮುಗಿದಿಲ್ಲ, ನಿನ್ನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿರುವ ತಿರುಚೆಂದರ್ ನಲ್ಲಿರುವ ಮುರುಗ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದ್ದಾರೆ. 
ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಾಗಿದೆ,. ಈ ಸಮಯದಲ್ಲಿ ಸಿಎಂ ಸುಮಾರು 40 ದೇವಾಲಯಗಳಿಗೆ ಭೇಟಿ ನೀಡಿದ್ದಾರೆ,  ಕಳೆದ ವಾರ ಶೃಂಗೇರಿಯ ಶಾರದಾಂಬ ದೇವಾಲಯಕ್ಕೆ ತೆರಳಿ ಹಲವು ಪೂಜೆ ಹೋಮ ಮಾಡಿಸಿದ್ದರು.
ಕಳೆದ ವರ್ಷ ಸೆಪ್ಟಂಬರ್ 23 ರಂದು ಕುಮಾರಸ್ವಾಮಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದರು,  ಹೀಗಾಗಿ ಗುರುವಾರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ, ಅವರ ಹಿತೈಷಿಗಳು ಪುರಾತನ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರೇ ಆರೋಗ್ಯ ಸುಧಾರಿಸುವುದಾಗಿ ಸಲಹೆ ನೀಡಿದ್ದರು, ಹೀಗಾಗಿ ಕುಮಾರ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ,
ಗುರುವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಪತ್ನಿ ಅನಿತಾ ಹಾಗೂ ಪುತ್ರ ನಿಖಿಲ್ ಜೊತೆ ತೂತುಕುಡಿಗೆ ತೆರಳಿದ್ದ ಕುಮಾರ ಸ್ವಾಮಿ ಮುರುಗನ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ, ಕುಮಾರಸ್ವಾಮಿ ಅವರಿಗೆ ಆಯುರಾರೋಗ್ಯ ನೀಡಬೇಕೆಂದು ಕುಟುಂಬಸ್ಥರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಿಜೆಪಿಯ ತೀವ್ರ ವಾಗ್ದಾಳಿಯ ನಡುವೆಯೂ ಕುಮಾರ ಸ್ವಾಮಿ ತಮ್ಮ ದೇಗುಲ ಯಾತ್ರೆ ಮುಂದುವರಿಸಿದ್ದಾರೆ,  ರಾಜ್ಯದಲ್ಲಿ ಜನ ಪ್ರವಾಹ, ಭೂ ಕುಸಿತ ಮತ್ತು ಬರ ದಿಂದ ಕಂಗೆಟ್ಟಿದ್ದಾರೆ, ಆದರೆ ಸಿಎಂ ಕುಮಾರಸ್ವಾಮಿ ಅಧಿಕಾರಕ್ಕಾಗಿ ದೇವಾಲಯ ಸುತ್ತುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ-14 ಪ್ರದೋಶ್ ಮಾಫಿ ಸಾಕ್ಷಿ ವಿಚಾರಣೆ, ದರ್ಶನ್ ಗೆ "ಕಂಟಕವಾಗುತ್ತಾ? ಆ.10 ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಧೀಶರು!

'ಕ್ಯಾ ಬೋಲ್ತಿ ಪಬ್ಲಿಕ್': ನೀಟ್ ನಂತರ CJPಯ ಮುಂದಿನ ಟಾರ್ಗೆಟ್ ನಿರುದ್ಯೋಗ; ಜನರ ಧ್ವನಿಯಾಗಲು ದೇಶಾದ್ಯಂತ ಅಭಿಯಾನ

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಕೆಆರ್ ಮಾರ್ಕೆಟ್ ಫ್ಲೈಓವರ್‌ ಮೂರು ತಿಂಗಳು ಬಂದ್; ಇಲ್ಲಿದೆ ಕಾರಣ...

ಪಿಂಚಣಿದಾರರ ದೂರುಗಳ ಪರಿಹಾರ ಸಮಯ ಸರಾಸರಿ 21 ದಿನಗಳಿಗೆ ಇಳಿಕೆ: ರಾಜ್ಯಸಭೆಗೆ ಸರ್ಕಾರದ ಮಾಹಿತಿ

ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ: ‘Tehelka’ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ