ವೈದ್ಯಕೀಯ ಶಿಕ್ಷಣ ಸಚಿವ ಡಿ ಕೆ ಶಿವಕುಮಾರ್(ಸಂಗ್ರಹ ಚಿತ್ರ) 
ರಾಜ್ಯ

ಸರ್ಕಾರಿ ಔಷಧಿ ಅಂಗಡಿಗಳು ಮುಚ್ಚುವಂತಿಲ್ಲ: ಸಚಿವ ಡಿ ಕೆ ಶಿವಕುಮಾರ್

ಔಷಧಗಳ ಮಾರಾಟಕ್ಕೆ ಇ-ಫಾರ್ಮಸಿ ವ್ಯವಸ್ಥೆ ವಿರೋಧಿಸಿ ಅಖಿಲ ಭಾರತ ಔಷಧಿ ...

ಬೆಂಗಳೂರು: ಔಷಧಗಳ ಮಾರಾಟಕ್ಕೆ ಇ-ಫಾರ್ಮಸಿ ವ್ಯವಸ್ಥೆ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟ ವ್ಯಾಪಾರಿಗಳ ಸಂಘ (ಎಐಒಸಿಡಿ) ಕರೆ ನೀಡಿರುವ ಬಂದ್‌ಗೆ ಸರ್ಕಾರಿ ಔಷಧಿ ಅಂಗಡಿಗಳು ಬೆಂಬಲ ನೀಡುವಂತಿಲ್ಲ ಎಂದು ವೈದ್ಯಕೀಯ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಔಷಧಿ ಅಂಗಡಿಗಳು ಯಾವುದೇ ಕಾರಣಕ್ಕೂ ಬಂದ್ ಮಾಡುವಂತಿಲ್ಲ ಎಂದಿರುವ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಾರ್ವಜನಿಕರಿಗೆ ಸೇವೆ ನೀಡದ ಸರ್ಕಾರಿ ಔಷಧಿ ಅಂಗಡಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೂಡ ಎಚ್ಚರಿಕೆ ನೀಡಿದ್ದಾರೆ.

ಔಷಧ ಮಳಿಗೆಗಳ ಮಾಲೀಕರು ಬಂದ್ ಗೆ ಕರೆ ನೀಡಿದ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಅಗತ್ಯ ಜೀವರಕ್ಷಕ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳುವಂತೆ ರಾಜ್ಯದ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. ಜಿಲ್ಲಾ, ತಾಲೂಕು, ಸಾರ್ವಜನಿಕ, ಸಮುದಾಯ ಕೇಂದ್ರ ಹಾಗೂ ಪ್ರಾಥಮಿಕ ಕೇಂದ್ರದಲ್ಲಿ ಜೀವರಕ್ಷಕ ಔಷಧ ಸಿಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ಸಕ್ರಿಯ ರಾಜಕೀಯಕ್ಕೆ ಬರುವ ಬಯಕೆ ಬಿಚ್ಚಿಟ್ಟ ಸೈನಾ ನೆಹ್ವಾಲ್; BJPಯಿಂದ ಚುನಾವಣಾ ಅಖಾಡಕ್ಕೆ ಎಂಟ್ರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ; ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ; ರಫ್ತುದಾರರಲ್ಲಿ ಆತಂಕ