ಸಾವಿಗೀಡಾದ ಮಂಜು ಮತ್ತು ಆತನ ತಂದೆ ಈರಣ್ಣ ಶೆಟ್ಟಿ 
ರಾಜ್ಯ

ಆಸ್ಪತ್ರೆ ಬಿಲ್ ಕಟ್ಟಲಾರದೆ ಪುತ್ರ ಆತ್ಮಹತ್ಯೆಗೆ ಶರಣು; ಆಘಾತದಿಂದ ಅನಾರೋಗ್ಯ ಪೀಡಿತ ತಂದೆ ಕೂಡ ಸಾವು

ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯ ಆಸ್ಪತ್ರೆ ಬಿಲ್ ಕಟ್ಟಲಾಗದೇ ಪುತ್ರ ನೇಣಿಗೆ ಕೊರಳೊಡ್ಡಿದ್ದಾನೆ, ಇತ್ತ ಮಗನ ಸಾವಿನ ಸುದ್ದಿ ತಿಳಿದು ತಂದೆಯೂ ...

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯ ಆಸ್ಪತ್ರೆ ಬಿಲ್ ಕಟ್ಟಲಾಗದೇ ಪುತ್ರ ನೇಣಿಗೆ ಕೊರಳೊಡ್ಡಿದ್ದಾನೆ, ಇತ್ತ ಮಗನ ಸಾವಿನ ಸುದ್ದಿ ತಿಳಿದು ತಂದೆಯೂ ಕೊನೆಯುಸಿರೆಳೆದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ತಂದೆಯ ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದು ಆಸ್ಪತ್ರೆಯಲ್ಲಿದ್ದ ಅಪ್ಪ ಕೂಡ ಮೃತಪಟ್ಟಿದ್ದಾರೆ.
ಬೂಕನಕೆರೆ ಗ್ರಾಮದ ಮಂಜು(25) ಮತ್ತು ತಂದೆ ಈರಣ್ಣ ಶೆಟ್ಟಿ(50) ಮೃತರು.
ಹಲವು ದಿನಗಳಿಂದ ತಂದೆ ಈರಣ್ಣ ಶೆಟ್ಟಿ ಮೈಸೂರಿನ‌ ಕುವೆಂಪು ನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯತ್ತಿದ್ದರು. ಇದರಿಂದಾಗಿ ಚಿಕಿತ್ಸೆ ವೆಚ್ಚವಾಗಿ 2 ಲಕ್ಷ ರೂ. ಬಿಲ್ ಆಗಿತ್ತು.  ಮನೆಯಲ್ಲಿದ್ದ ಚಿನ್ನಾಭರಣ ಮಾರಿ ಮಂಜು ಬಿಲ್ ಪಾವತಿ ಮಾಡಿದ್ದ,  ಚಿಕಿತ್ಸೆ ಮುಂದುವರಿದ ಹಿನ್ನೆಲೆಯಲ್ಲಿ ಮತ್ತೆ ಬಿಲ್ ಹೆಚ್ಚಿತ್ತು. 
ಬುಧವಾರ ಮನೆಗೆ ಬಂದ ಮಂಜು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.  ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈರಣ್ಣ ಶೆಟ್ಟಿ ಮಗನ ಸಾವಿನ ಸುದ್ದಿ ಕೇಳುತ್ತಲೇ ಕೊನೆಯುಸಿರೆಳೆದಿದ್ದಾರೆ.  ಇದನ್ನು ತಿಳಿದ ಬೂಕನಕೆರೆ ಗ್ರಾಮಸ್ಥರು ಉಳಿದ ಬಿಲ್ ಪಾವತಿ ಮಾಡಿ ಈರಣ್ಣ ಶವವನ್ನು ಗ್ರಾಮಕ್ಕೆ ತಂದಿದ್ದಾರೆ, ತಂದೆ ಮಗನ ಸಾವಿಗೆ ಗ್ರಾಮಸ್ಥರು ಕಣ್ಣೀರು ಹಾಕಿ ವಿಧಿಯನ್ನು ಶಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT