ಸಂಗ್ರಹ ಚಿತ್ರ 
ರಾಜ್ಯ

ಮೂಡಬಿದಿರೆ: ಪ್ರೇಯಸಿಗೆ ಚೂರಿಯಿಂದ ಇರಿದು ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಪ್ರಿಯಕರ!

ತಾನು ಪ್ರೀತಿಸುತ್ತಿದ್ದ ಯುವತಿಗೆ ಚೂರಿಯಿಂದ ಇರಿದ ಯುವಕನೊಬ್ಬ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿ ನಡೆದಿದೆ.

ಮೂಡಬಿದಿರೆ: ತಾನು ಪ್ರೀತಿಸುತ್ತಿದ್ದ ಯುವತಿಗೆ ಚೂರಿಯಿಂದ ಇರಿದ ಯುವಕನೊಬ್ಬ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿ ನಡೆದಿದೆ.
ಶುಕ್ರವಾರ ಮೂಡಬಿದಿರೆಯ ಪ್ರಾಂತ್ಯ ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ ರೋಹಿತ್ ((26) ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಮುನ್ನ ತನ್ನ ಪ್ರೇಯಸಿ ಚರಿಷ್ಮಾಳಿಗೆ ಚೂರಿಯಿಂದ ಬಲವಾಗಿ ಇರಿದು, ಸುತ್ತಿಗೆಯಿಂದ ಹೊಡೆದು ಗಾಯಗೊಳಿಸಿದ್ದಾನೆ. ಬಳಿಕ ಆಕೆಯ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಗಂಭೀರ ಗಾಯಗೊಂಡಿದ್ದ ಯುವತಿ ಚರಿಷ್ಮಾಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲ ನೀಡದ ಕಾರಣ ಆಕೆ ಸಹ ಅಸುನೀಗಿದ್ದಾಳೆ.
ಘಟನೆ ಹಿನ್ನೆಲೆ
ಮಂಗಳೂರು ಬಜಾಲ್ ಮೂಲದವನಾದ ರೋಹಿತ್ ಹಾಗೂ ಚರಿಷ್ಮಾ ಕಳೆದ ಕೆಲ ತಿಂಗಳ್ಲಿನಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಾಂತ್ಯ ನಿವಾಸಿಯಾದ ಚರಿಷ್ಮಾ ಹಾಗೂ ರೋಹಿತ್ ದೂರದ ಸಂಬಂಧಿಕರು ಎನ್ನಲಾಗಿದ್ದು ರೋಹಿತ್ ಆಕೆಯ ಮನೆಗೆ ಆಗಾಗ ಬರುತ್ತಿದ್ದನೆನ್ನಲಾಗಿದೆ.
ಮಂಗಳೂರಿನ ನೃತ್ಯತಂಡವೊಂದರ ಸದಸ್ಯೆಯಾಗಿದ್ದ ಚರಿಷ್ಮಾ ಹಾಗೂ ರೋಹಿತ್ ನಡುವೆ ಇತ್ತೀಚೆಗೆ ಕೆಲ ಸಣ್ಣ ವಿಚಾರಗಳಲ್ಲಿ ಮನಸ್ತಾಪ ಉಂಟಾಗಿತ್ತು.
ಇಂದು (ಶುಕ್ರವಾರ) ಯುವತಿ ಒಬ್ಬಳೇ ಮನೆಯಲ್ಲಿದ್ದ ವೇಳೆ ಆಗಮಿಸಿದ ರೋಹಿತ್ ಆಕೆಗೆ ಚೂರಿಯಿಂದ ಬಲವಾಗಿ ಇರಿದದ್ದಲ್ಲದೆ ಸುತ್ತಿಗೆಯಿಂದ ತಲೆಗೆ ಹೊಡೆದಿದ್ದಾನೆ.ಬಳಿಕ ತಾನು ಸಹ ಆಕೆಯ ಮನೆಯಲ್ಲೇ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಮೂಡದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT