ಉಪ ಮುಖ್ಯಮಂತ್ರಿ ಜಿ ಪಮೇಶ್ವರ ಅವರು ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಹಾಗೂ ಉಪ ಮೇಯರ್ ರಮಿಳಾ ಉಮಾಶಂಕರ್ ಅವರನ್ನು ಅಭಿನಂದಿಸಿದರು. 
ರಾಜ್ಯ

ಶೇ.100ರಷ್ಟು ಕಸ ವಿಂಗಡಣೆಯ ಗುರಿ ಸಾಧಿಸುತ್ತೇವೆ: ನೂತನ ಮೇಯರ್ ಗಂಗಾಂಬಿಕೆ

ನಗರದಲ್ಲಿ ಶೇ.100ರಷ್ಟು ಕಸ ವಿಂಗಡಣೆಯ ಗುರಿ ಸಾಧಿಸುತ್ತೇವೆ ಎಂದು ಬೃಹತ್ ಬೆಂಗಳೂರು ಮಹಾನಗರ....

ಬೆಂಗಳೂರು: ನಗರದಲ್ಲಿ ಶೇ.100ರಷ್ಟು ಕಸ ವಿಂಗಡಣೆಯ ಗುರಿ ಸಾಧಿಸುತ್ತೇವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಭಾರಿ ಹೈಡ್ರಾಮಾಗಳ ಮಧ್ಯೆ ಬೆಂಗಳೂರಿನ 52ನೇ ಮೇಯರ್ ಆಗಿ ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗಂಗಾಂಬಿಕೆ ಅವರು, ಸ್ವಚ್ಛತೆ, ಆರೋಗ್ಯ, ಉತ್ತಮ ಪರಿಸರ ಮತ್ತು ರಾಜಕಾಲುವೆ ಒತ್ತುವರಿ ತೆರವಿಗೆ ಹೆಚ್ಚು ಒತ್ತುಕೊಡುವುದಾಗಿ ಭರವಸೆ ನೀಡಿದ್ದಾರೆ.
ನಗರದಲ್ಲಿ ಕಸದ್ದೇ ಅತಿದೊಡ್ಡ ಸಮಸ್ಯೆಯಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದಾಗಿ ಹಾಗೂ ನಗರನ್ನು ಕಸಮುಕ್ತ ಮಾಡುವುದಾಗಿ ಹೇಳಿದರು. ಅಲ್ಲದೆ ಮೂಲದಲ್ಲೇ ಕಸ ವಿಂಗಡಣೆ ಮಾಡಿದರೆ ಈ ಸಮಸ್ಯೆಯನ್ನು ಸುಲಭವಾಗಿ ಪರಿಹರಿಸಬಹುದು. ಈ ವಿಚಾರದಲ್ಲಿ ಜನರ ಸಹಕಾರ ಅಗತ್ಯ ಎಂದರು.
ಬೆಂಗಳೂರು ಅಭಿವೃದ್ಧಿ ಎಂದರೆ ಆದಾಯ ಕ್ರೋಢೀಕರಣ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಗಮನ ಹರಿಸುತ್ತೇನೆ. ಬಿಬಿಎಂಪಿ ಮಾರುಕಟ್ಟೆಗಳಿಂದ ಶುಲ್ಕ ಸಂಗ್ರಹಕ್ಕೆ ಆದ್ಯತೆ ನೀಡುತ್ತೇನೆ ಎಂದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಬಿಬಿಎಂಪಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಈಗ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರೂ ನೆರವು ಕೊಡುವ ಭರವಸೆ ಕೊಟ್ಟಿದ್ದಾರೆ. ಎಲ್ಲವನ್ನೂ ಬಳಸಿಕೊಂಡು ನಗರದ ಅಭಿವೃದ್ಧಿಗೆ ಯೋಜನೆ ರೂಪಿಸುತ್ತೇವೆ ಎಂದು ನೂತನ ಮೇಯರ್ ಗಂಗಾಂಬಿಕೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT