ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ: ಸುಪ್ರೀಂ ಕೋರ್ಟ್ ತೀರ್ಪು ಸಂತಸ ತಂದಿದೆ- ಜಯಮಾಲ 
ರಾಜ್ಯ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ: ಸುಪ್ರೀಂ ಕೋರ್ಟ್ ತೀರ್ಪು ಸಂತಸ ತಂದಿದೆ- ಜಯಮಾಲ

ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ 800 ವರ್ಷಗಳ ಹಿಂದಿನ ಪದ್ಧತಿಗೆ ತೆರೆ ಎಳೆದಿರುವ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಸಚಿವೆ ಜಯಮಾಲ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ 800 ವರ್ಷಗಳ ಹಿಂದಿನ ಪದ್ಧತಿಗೆ ತೆರೆ ಎಳೆದಿರುವ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಸಚಿವೆ ಜಯಮಾಲ ಪ್ರತಿಕ್ರಿಯೆ ನೀಡಿದ್ದಾರೆ. 
ಸುಪ್ರೀಂ ತೀರ್ಪಿನ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಜಯಮಾಲ, " ನನಗೆ ನಮ್ಮ ಸಂವಿಧಾನ, ನ್ಯಾಯಾಂಗದ ಬಗ್ಗೆ ನಂಬಿಕೆ ಇದೆ, ಸುಪ್ರೀಂ ಕೋರ್ಟ್ ತೀರ್ಪಿನಿಂದ ಸಂತಸವಾಗಿದೆ ಎಂದು ಹೇಳಿದ್ದಾರೆ. 
ಈ ಹಿಂದೆ ನಟಿ ಜಯಮಾಲ ಅವರು ಅಯ್ಯಪ್ಪಸ್ವಾಮಿ ಗರ್ಭಗುಡಿ ಪ್ರವೇಶಿಸಿ ಪಾದ ಸ್ಪರ್ಶ ಮಾಡಿದ್ದೆ ಎಂದು ಹೇಳಿ ದೇಗುಲ ಸಮಿತಿ ಹಾಗೂ ಕೇರಳದ ಭಕ್ತರ ಕೋಪಕ್ಕೆ ತುತ್ತಾಗಿದ್ದರು. ದೇವಸ್ಥಾನದ ಜ್ಯೋತಿಷಿ ಉನ್ನಿಕೃಷ್ಣನ್ ಪಣಿಕ್ಕರ್, ಅವರ ಸಹಾಯಕ ರಘುಪತಿ ಮತ್ತು ದೇವಸ್ಥಾನದ ಕಾರ್ಯಕಾರಿ ಅಧಿಕಾರಿ ರಾಜಶೇಖರ್ ಇನ್ನಿತರರು ಕೂಡಾ ಆರೋಪಿಗಳಾಗಿ ಕೋರ್ಟ್ ಮೆಟ್ಟಿಲೇರಿದಿದ್ದರು. ಆದರೆ, ಕೊನೆಗೆ  ಜಯಮಾಲಾ ಅವರನ್ನು ನಿರ್ದೋಷಿ ಎಂದು ಕೋರ್ಟ್ ಘೋಷಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT