ಜಮೀರ್ ಅಹಮದ್ ಖಾನ್ 
ರಾಜ್ಯ

ಪೊಲೀಸ್ ಎಸ್ಕಾರ್ಟ್‌ನಲ್ಲಿಯೇ ತ್ರಿಬಲ್‌ ರೈಡ್ ಮಾಡಿದ ಸಚಿವ ಜಮೀರ್ ಅಹಮದ್ ವಿರುದ್ದ ದೂರು

ಪೊಲೀಸ್ ಎಸ್ಕಾರ್ಟ್‌ನಲ್ಲಿಯೇ ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡ್ ಮಾಡಿದ ವಕ್ಫ್ ಹಾಗೂ ಆಹಾರ ಮತ್ತು ನಾಗರಿಕ....

ತುಮಕೂರು: ಪೊಲೀಸ್ ಎಸ್ಕಾರ್ಟ್‌ನಲ್ಲಿಯೇ ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡ್ ಮಾಡಿದ ವಕ್ಫ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್‌ ಅಹಮದ್‌ ಖಾನ್ ವಿರುದ್ಧ ವಿಶ್ವಮಾನವ ಹಕ್ಕುಗಳ ಸೇವಾ ಕೇಂದ್ರದ ಅಧ್ಯಕ್ಷ ಸಿದ್ದಲಿಂಗೇಗೌಡ ಅವರು ದೂರು ನೀಡಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಿಧನಗೆರೆ ಗ್ರಾಮದ ಸಂಬಂಧಿಕರೊಬ್ಬರ ಮಗಳ ಮದುವೆಗೆ ಪಟ್ಟಣದ ದಿವ್ಯಾ ಕಲ್ಯಾಣ ಮಂಟಪಕ್ಕೆ ಆಗಮಿಸಿದ್ದ ಸಚಿವ ಜಮೀರ್‌ ಆಹಮದ್‌ ಅವರನ್ನು ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಬೆಂಬಲಿಗರು ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿದರು. ನಂತರ ಬೆಂಬಲಿಗರ ಬುಲೆಟ್‌ ವಾಹನದಲ್ಲಿ ಇನ್ನಿಬ್ಬರನ್ನು ಹಿಂಬದಿ ಕೂರಿಸಿಕೊಂಡು ಪಟ್ಟಣದ ಕಲ್ಯಾಣ ಮಂಟಪಕ್ಕೆ ಮೆರವಣಿಗೆ ಮೂಲಕ ಬೆಂಬಲಿಗರ ಜೈಕಾರದೊಂದಿಗೆ ಆಗಮಿಸುತ್ತಿದ್ದಾಗ, ಗ್ರಾಮ ದೇವತೆ ಸರ್ಕಲ್‌ನಲ್ಲಿ ಶಾಸಕ ಡಾ.ರಂಗನಾಥ್‌ ಜೊತೆಗೂಡಿದರು. ಹಿಂಬದಿಯ ಬೆಂಬಲಿಗರೊಬ್ಬರನ್ನು ಕೆಳಗಿಳಿಸಿದ ಸಚಿವರು, ಶಾಸಕ ಡಾ.ರಂಗನಾಥ್‌ ಜತೆಗೆ ಮತ್ತೊಬ್ಬ ಬೆಂಬಲಿಗರನ್ನು ಕೂರಿಸಿಕೊಂಡು ತ್ರಿಬಲ್‌ ರೈಡಿಂಗ್‌ ಮಾಡಿಕೊಂಡು ಕಲ್ಯಾಣ ಮಂಟಪಕ್ಕೆ ಆಗಮಿಸಿದರು.
ಸಾಮಾನ್ಯ ಜನ ಬೈಕ್‌ನಲ್ಲಿ ತ್ರಿಬಲ್‌ ರೈಡಿಂಗ್‌ ಮಾಡಿದರೆ ಇದೇ ಪೊಲೀಸರು ದಂಡ ಕಟ್ಟಿಸುತ್ತಾರೆ, ಇಲ್ಲವೇ ಕೇಸು ದಾಖಲಿಸುತ್ತಾರೆ. ಆದರೆ ಸಚಿವ ಮತ್ತು ಶಾಸಕರ ತ್ರಿಬಲ್‌ ರೈಡಿಂಗ್‌ಗೆ ಎಸ್ಕಾರ್ಟ್‌ ಕೊಟ್ಟಿದ್ದಾರೆ ಎಂದು ಜನ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಂಚಾರಿ ನಿಯಮ ಉಲ್ಲಂಘಿಸಿದ್ದು, ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ದಲಿಂಗೇಗೌಡ ಅವರು ಕುಣಿಗಲ್ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ ಈ ಸಂಬಂಧ ಶಾಸಕಾಂಗ ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷ ಈಶ್ವರ ಖಂಡ್ರೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT