ಮಲ್ಲಿಕಾರ್ಜುನ ಖರ್ಗೆ 
ರಾಜ್ಯ

ಪುರುಷರು ಕೂಡ ಶಬರಿಮಲೆ ತೀರ್ಪನ್ನು ಸ್ವಾಗತಿಸಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ನೀಡಿರುವ ...

ಕಲಬುರಗಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕಾಂಗ್ರೆಸ್ ನಾಯಕ ಹಾಗೂ ಕಲಬುರಗಿ ಕ್ಷೇತ್ರದ ಸಂಸದ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ.

ಕಲಬುರಗಿಯಲ್ಲಿ ಅವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ಕೇವಲ ಮಹಿಳೆಯರಲ್ಲದೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಪುರುಷರು ಕೂಡ ಸುಪ್ರೀಂ ಕೋರ್ಟ್ ನ ತೀರ್ಪನ್ನು ಸ್ವಾಗತಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದ ನಂತರವೂ ಅಸ್ಪೃಶ್ಯತೆ ಮತ್ತು ತಾರತಮ್ಯ ದೇವಸ್ಥಾನಗಳು ಸೇರಿದಂತೆ ಹಲವು ಕಡೆಗಳಲ್ಲಿ ಇರುವುದು ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ರಾಮಜನ್ಮಭೂಮಿ ಬಗ್ಗೆ ಕೇಸಿನ ಬಗ್ಗೆ ಕೇಳಿದ ಪ್ರಶ್ನೆಗೆ ಖರ್ಗೆ, ಕಾಂಗ್ರೆಸ್ ಈ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲಿ ನಂಬಿಕೆ ಇಟ್ಟುಕೊಂಡಿದೆ. ಈ ವಿವಾದ ನ್ಯಾಯಾಲಯದ ಮುಂದಿರುವುದರಿಂದ ಅದರ ಕುರಿತು ಮಾತನಾಡುವುದು ಸರಿಯಲ್ಲ. ಕಾಂಗ್ರೆಸ್ ನಾಯಕಿ ಹಾಗೂ ಚಿತ್ರನಟಿ ರಮ್ಯ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ರಫೆಲ್ ಯುದ್ಧ ವಿಮಾನ ಒಪ್ಪಂದ ಕುರಿತು ಪ್ರಧಾನಿ ಮೋದಿಯವರ ಕಠಿಣ ವರ್ತನೆಯನ್ನು ಕಂಡು ಅವರು ಟ್ವೀಟ್ ಮಾಡಿದ್ದರು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT