ನಾಲ್ವರು ಆರೋಪಿಗಳೊಂದಿಗೆ ಅರಣ್ಯಾಧಿಕಾರಿಗಳು 
ರಾಜ್ಯ

ಉಡದ ಅಂಗಾಂಗವನ್ನು ಗಿಡಮೂಲಿಕೆಯೆಂದು ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ವಿಲಕ್ಷಣ ಘಟನೆಯೊಂದರಲ್ಲಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಉಡದ ಅಂಗಾಂಗಳನ್ನು

ಬೆಂಗಳೂರು: ವಿಲಕ್ಷಣ ಘಟನೆಯೊಂದರಲ್ಲಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಉಡದ ಅಂಗಾಂಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಾಬಾಬುಡನ್ ಗಿರಿಯಲ್ಲಿ  ವಿವಿಧ ಸರೀಸೃಪಗಳ 49 ಅಂಗಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸರೀಸೃಪಗಳ ಅಂಗಾಂಗಗಳನ್ನು ಒಣಗಿಸಿ ಅದನ್ನು ಗಿಡಮೂಲಿಕೆಯಾಗಿ ಮಾರಾಟ ಮಾಡುತ್ತಿದ್ದರು. ಬಾಬಾಬುಡನ್ ಗಿರಿ ಬೆಟ್ಟದಲ್ಲಿ ಅಂಗಡಿ ಮಾಲೀಕನೊಬ್ಬ ಸರೀಸೃಪಗಳ ಅಂಗಾಂಗಗಳನ್ನು ಮಾರಾಟ ಮಾಡುತ್ತಿದ್ದು ಅದು ವನ್ಯಮೃಗ ರಕ್ಷಣಾ ಕಾಯ್ದೆಗೆ ವಿರುದ್ಧವಾದ ಕ್ರಮವಾಗಿದ್ದು ಈ ಸಂಬಂಧ ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ನಾಲ್ವರನ್ನು ಬಂಧಿಸಲಾಗಿದೆ.

ವನ್ಯಮೃಗ ಅಪರಾಧ ನಿಯಂತ್ರಣ ವಿಭಾಗದ ಅಧಿಕಾರಿಗಳಿಗೆ ಸಿಕ್ಕಿದ ನಿಖರ ಮಾಹಿತಿ ಆಧಾರದ ಮೇಲೆ ರೇಂಜ್ ಅರಣ್ಯಾಧಿಕಾರಿ ಶಿಲ್ಪ ನೇತೃತ್ವದ ಚಿಕ್ಕಮಗಳೂರು ಅರಣ್ಯಾಧಿಕಾರಿಗಳು ದತ್ತಪೀಠ ಬಾಬಾಬುಡನ್ ಗಿರಿಯಲ್ಲಿ ಸರೀಸೃಪಗಳ ಅಂಗಾಂಗಳನ್ನು ಮುಖ್ಯವಾಗಿ ಉಡದ ಭಾಗವನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT