ಶಾಸಕ ಜೆ.ಎನ್ ಗಣೇಶ್ 
ರಾಜ್ಯ

ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಜಾಮೀನು ಕೋರಿ ಗಣೇಶ್ ಅರ್ಜಿ, ಬಿಡದಿ ಪೊಲೀಸರಿಗೆ ನೋಟಿಸ್

ಶಾಸಕ ಆನಂದ ಸಿಂಗ್ ಮೇಲಿನ ಹಲ್ಲೆ ಪ್ರಕರಣದ ಆರೋಪಿ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಬಿಡದಿ ಪೊಲೀಸರಿಗೆ ಹೈಕೋರ್ಟ್ ...

ಬೆಂಗಳೂರು: ಶಾಸಕ ಆನಂದ ಸಿಂಗ್ ಮೇಲಿನ ಹಲ್ಲೆ ಪ್ರಕರಣದ ಆರೋಪಿ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಬಿಡದಿ ಪೊಲೀಸರಿಗೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರು ಜನಪ್ರತಿನಿಧಿಯಾಗಿದ್ದು, ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೋಳ್ಳಬೇಕಿದೆ. ಆದ್ದರಿಂದ ಅವರಿಗೆ ಜಾಮೀನು ನೀಡಬೇಕು ಎಂದು ಗಣೇಶ್ ಪರ ವಕೀಲರು ಮನವಿ ಮಾಡಿದರು. 
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆಯನ್ನು ಏ.8 ಕ್ಕೆ ಮುಂದೂಡಿತು. ಈ ಹಿಂದೆ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯ, ಗಣೇಶ್ ಅರ್ಜಿಯನ್ನು ತಿರಸ್ಕರಿಸಿತ್ತು. 
ಇತ್ತೀಚೆಗೆ ಬಿಜೆಪಿಯ ಆಪರೇಷನ್ ಕಮಲ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಪಕ್ಷದ ನಾಯಕರು ಈಗಲ್ಟನ್ ರೆಸಾರ್ಟ್‍ಗೆ ಕರೆದೊಯ್ದಿದ್ದರು. ಅಲ್ಲಿ ಗಣೇಶ್ ಹಾಗೂ ಆನಂದ್ ಸಿಂಗ್ ಪರಸ್ಪರ ಹೊಡೆದಾಡಿಕೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT