ಸ್ವಾಧೀನ ಪತ್ರ ವಿತರಣೆ ವಿಳಂಬ: ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ನಿಂದ ಜಾಮೀನು ರಹಿತ ವಾರಂಟ್ 
ರಾಜ್ಯ

ಸ್ವಾಧೀನ ಪತ್ರ ವಿತರಣೆ ವಿಳಂಬ: ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ನಿಂದ ಜಾಮೀನು ರಹಿತ ವಾರಂಟ್

ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸ್ವಾಧೀನ ಪ್ರಮಾಣ ಪತ್ರ ವಿತರಣೆ ವಿಳಂಬ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಗೆ ಗೈರು ಹಾಜರಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)....

ಬೆಂಗಳೂರು: ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸ್ವಾಧೀನ ಪ್ರಮಾಣ ಪತ್ರ ವಿತರಣೆ ವಿಳಂಬ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಗೆ ಗೈರು ಹಾಜರಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರಿಗೆ ಹೈಕೋರ್ಟ್ ಜಾಮೀನು ರಹಿತ ವಾರಂಟ್ (ಎನ್‍ಬಿ ಡಬ್ಲ್ಯು) ಜಾರಿ ಮಾಡಿದೆ. 
ಬೆಂಗಳೂರು ದಕ್ಷಿಣ ಜಿಲ್ಲೆ, ಬೇಗೂರು ತಾಲೂಕಿನ ಹುಳಿಮಾವು ಹೋಬಳಿಯಲ್ಲಿನ ವಾಲ್ ಮಾರ್ಕ್ ಅಪಾರ್ಟ್ ಮೆಂಟ್ ಕಟ್ಟಡದ ನಿವಾಸಿಗಳಿಗೆ ಸ್ವಾಧೀನ ಪ್ರಮಾಣ ಪತ್ರ ನೀಡಲು ಬಿಬಿಎಂಪಿ ನಿರಾಕರಿಸಿದೆ ಎಂದು ಆರೋಪಿಸಿ ನಾಕೋಡ ಕನ್ಸ್ ಟ್ರಕ್ಷನ್ ಕಂಪನಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ  ನ್ಯಾಯಮೂರ್ತಿ ಎಸ್.ಎನ್.ಸತ್ಯನಾರಾಯಣ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆಗೆ ಹಾಜರಾಗದ ಬಿಬಿಎಂಪಿ ಆಯುಕ್ತರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿತು. 
ಬಫರ್ ವಲಯ ಒತ್ತುವರಿಯಾಗಿದೆ ಎಂಬ ಆರೋಪದಡಿ ಬಿಬಿಎಂಪಿ ಅರ್ಜಿದಾರರಿಗೆ ವಸತಿ ಸ್ವಾಧೀನ ಪತ್ರ ನೀಡಲು ನಿರಾಕರಿಸಿದೆ. ಆದರೆ, ಬಿಡಿಎ ಈಗಾಗಲೇ ತಮ್ಮ ಭೂಮಿ ಒತ್ತುವರಿಯಾಗಿಲ್ಲ ಎಂದು ವರದಿ ನೀಡಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬಿಬಿಎಂಪಿ ಆಯುಕ್ತರಿಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಿತ್ತು. 
ಆದರೆ, ಮಂಗಳವಾರ ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ಆಯುಕ್ತರು ಚುನಾವಣೆ ಕಾರ್ಯದ ನಿಮಿತ್ತ ಹಾಜರಾಗುವುದು ತಡವಾಗಿದೆ. ಆದ್ದರಿಂದ ಸಮಯಾವಕಾಶ ನೀಡಬೇಕು. ಕೋರ್ಟ್ ಗೆ ಬರುತ್ತಾರೆ ಎಂದು ಮನವಿ ಮಾಡಿದರು. ಇದಕ್ಕೆ ಒಪ್ಪಿಗೆ ಸೂಚಿಸದ ನ್ಯಾಯಪೀಠ, ಬಿಬಿಎಂಪಿ ಆಯುಕ್ತರು ಖುದ್ದು ಹಾಜರಾಗಲೇಬೇಕು ಎಂದು ಸೂಚಿಸಿ ವಿಚಾರಣೆಯನ್ನು ಏ.3ಕ್ಕೆ ಮುಂದೂಡಿತು. 
ಪ್ರಕರಣವೇನು?
ಬೆಂಗಳೂರು ದಕ್ಷಿಣ ಜಿಲ್ಲೆ ಬೇಗೂರು ತಾಲೂಕಿನ ಹುಳಿಮಾವು ಹೋಬಳಿಯಲ್ಲಿ ಸರ್ವೆ ಸಂಖ್ಯೆ 52ರಲ್ಲಿನ ಬಫರ್ ವಲಯವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಲಾಗಿದೆ ಎಂದು ಆಕ್ಷೇಪಿಸಿ ಬಿಬಿಎಂಪಿ ಅಲ್ಲಿನ ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸ್ವಾಧೀನ ಪತ್ರ ನೀಡಲು ನಿರಾಕರಿಸಿತ್ತು. ಈ ಸಂಬಂಧ ನಿವಾಸಿಗಳು ಬಿಡಿಎಗೆ ದೂರು ಸಲ್ಲಿಸಿದ್ದರು.  2015ರ ಸೆಪ್ಟೆಂಬರ್ ನಲ್ಲಿ ಪ್ರದೇಶದ ಸರ್ವೆ ನಡೆಸಿದ್ದ ಬಿಡಿಎ, ಈ ಪ್ರದೇಶ ಸಂಪೂರ್ಣವಾಗಿ ಅರ್ಜಿದಾರ ನಿರ್ಮಾಣ ಸಂಸ್ಥೆಗೆ ಸೇರಿದ್ದು, ಅದನ್ನು  ಕಾನೂನುಬದ್ಧವಾಗಿಯೇ ಖರೀದಿಸಲಾಗಿದೆ ಎಂದು ವರದಿ ನೀಡಿತ್ತು. ಆದರೂ, ಬಿಬಿಎಂಪಿ ಸ್ವಾಧೀನ ಪತ್ರ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT