ಸಾಂದರ್ಭಿಕ ಚಿತ್ರ 
ರಾಜ್ಯ

ಶುಲ್ಕ, ಸೌಲಭ್ಯ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸುವಂತೆ ಖಾಸಗಿ ಶಾಲೆಗಳಿಗೆ ಸರ್ಕಾರ ಆದೇಶ

ರಾಜ್ಯಾದ್ಯಂತ ಇರುವ ಖಾಸಗಿ ಶಾಲೆಗಳು ತಮ್ಮ ಶುಲ್ಕ ವಿವರಗಳನ್ನು ಅಧಿಕೃತ ವೆಬ್ ಸೈಟ್ ನಲ್ಲಿ ...

ಬೆಂಗಳೂರು: ರಾಜ್ಯಾದ್ಯಂತ ಇರುವ ಖಾಸಗಿ ಶಾಲೆಗಳು ತಮ್ಮ ಶುಲ್ಕ ವಿವರಗಳನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು ಮತ್ತು ಅದರ ಪ್ರತಿಯೊಂದನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಬೇಕು ಎಂದು ಆದೇಶ ಹೊರಡಿಸಲಾಗಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದ್ದು ಇಲಾಖೆಯ ಅಧೀನದಲ್ಲಿ ಬರುವ ಶಾಲೆಗಳು ತಮ್ಮ ಶಾಲೆಯ ಶುಲ್ಕ ಮತ್ತು ಇತರ ಸೌಲಭ್ಯಗಳ ವಿವರಗಳನ್ನು 6*10 ಅಳತೆಯ ಫ್ಲೆಕ್ಸ್ ನಲ್ಲಿ ಪ್ರಕಟಿಸಿ ಶಾಲೆಯ ಹೊರಗೆ ಆವರಣದಲ್ಲಿ ನೇತು ಹಾಕಬೇಕು, ಅದು ಎಲ್ಲ ಪೋಷಕರಿಗೆ ಸರಿಯಾಗಿ ಗೋಚರವಾಗುವಂತಿರಬೇಕು ಎಂದು ಹೇಳಿದೆ.
ಈ ವಿವರಗಳನ್ನು ಇದೇ ತಿಂಗಳು 15ರೊಳಗೆ ಶಾಲೆಗಳಲ್ಲಿ ಪ್ರಕಟಿಸುವಂತೆ ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಶಾಲೆಗಳಲ್ಲಿ ಅರ್ಹ ಶಿಕ್ಷಕರನ್ನು ನೇಮಕ ಮಾಡಬೇಕು, ಅವರಿಗೆ ಶಿಕ್ಷಣ ಕಾಯ್ದೆಯಡಿ ಇರುವ ನಿಯಮದ ಪ್ರಕಾರ ವೇತನ ನೀಡಬೇಕು ಎಂದು ಕೂಡ ಸೂಚಿಸಲಾಗಿದೆ.
ಆರ್ ಟಿಇ ಕಾಯ್ದೆ ಪ್ರಕಾರ, ಪ್ರಾಥಮಿಕ ಹಂತದ ಶಿಕ್ಷಕರಿಗೆ ತಿಂಗಳಿಗೆ 25 ಸಾವಿರದ 800 ರೂಪಾಯಿ ವೇತನ ನೀಡಬೇಕು, ಹೈಸ್ಕೂಲ್ ವಿಭಾಗದ ಶಿಕ್ಷಕರಿಗೆ ತಿಂಗಳಿಗೆ 33 ಸಾವಿರದ 450 ರೂಪಾಯಿ ವೇತನ ನೀಡಬೇಕೆಂಬ ನಿಯಮವಿದೆ. ಬೋಧಕೇತರ ವರ್ಗಕ್ಕೆ ಪ್ರಥಮ ದರ್ಜೆ ಕ್ಲರ್ಕ್ ಗೆ ತಿಂಗಳಿಗೆ 27 ಸಾವಿರದ 650 ರೂಪಾಯಿ, ದ್ವಿತೀಯ ದರ್ಜೆ ಕ್ಲರ್ಕ್ ಗಳಿಗೆ ತಿಂಗಳಿಗೆ 21 ಸಾವಿರದ 400 ರೂಪಾಯಿ ವೇತನ ನೀಡಬೇಕೆಂಬ ಕಡ್ಡಾಯವಿದೆ. ಡಿ ಗ್ರೂಪ್ ನೌಕರರಿಗೆ ತಿಂಗಳಿಗೆ 17 ಸಾವಿರ ರೂಪಾಯಿ ವೇತನ ನೀಡಬೇಕೆಂದು ಆರ್ ಟಿಇ ಕಾಯ್ದೆಯಲ್ಲಿ ಹೇಳಲಾಗಿದೆ.
ಆರ್ ಟಿಇ ಕಾಯ್ದೆಯನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಶಾಲಾ ವ್ಯವಸ್ಥಾಪಕ ಮಂಡಳಿಗೆ ಎಚ್ಚರಿಕೆ ನೀಡಿದೆ. ಖಾಸಗಿ ಶಾಲೆಗಳ ವ್ಯವಸ್ಥಾಪಕ ಒಕ್ಕೂಟ ಈ ನಿಯಮಕ್ಕೆ ವಿರೋಧ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT