ಬೆಂಗಳೂರು: 'ನಮ್ಮ ಮೆಟ್ರೋ' ನಿಲ್ದಾಣದ ಬಳಿ ಮಾರಕಾಸ್ತ್ರ ಹಿಡಿದು ಬೆದರಿಸುತ್ತಿದ್ದ ಇಬ್ಬರ ಬಂಧನ 
ರಾಜ್ಯ

ಬೆಂಗಳೂರು: 'ನಮ್ಮ ಮೆಟ್ರೋ' ನಿಲ್ದಾಣದ ಬಳಿ ಮಾರಕಾಸ್ತ್ರ ಹಿಡಿದು ಬೆದರಿಸುತ್ತಿದ್ದ ಇಬ್ಬರ ಬಂಧನ

ಯಲಚೇನಹಳ್ಳಿಯ ನಮ್ಮ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರದಿಂದ ಹೊಡೆದು ಸಾರ್ವಜನಿಕರಿಗೆ ಜೀವ ಬೆದರಿಕೆ ಹಾಕಿದ್ದಲ್ಲದೆ ವಾಹನದ ಗಾಜು ಒಡೆದು ....

ಬೆಂಗಳೂರು: ಯಲಚೇನಹಳ್ಳಿಯ ನಮ್ಮ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರದಿಂದ ಹೊಡೆದು ಸಾರ್ವಜನಿಕರಿಗೆ ಜೀವ ಬೆದರಿಕೆ ಹಾಕಿದ್ದಲ್ಲದೆ ವಾಹನದ ಗಾಜು ಒಡೆದು ಚಾಲಕನ ಹತ್ಯೆಗೆ ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 
ಘಟನೆ ಸಂಬಂಧ ಹರ್ಷಿತ್‍ಗೌಡ (20)  ಹಾಗೂ  ಶರಣ್ (20)  ಎನ್ನುವವರನ್ನು ಸುಬ್ರಮಣ್ಯಪುರ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ.ಇವರು ಬುಧವಾರ ಸಂಜೆ ಸಮಯದಲ್ಲಿ ಯಲಚೇನಹಳ್ಳಿ ಮೆಟ್ರೋ ನಿಲ್ದಾಣ ಸಮೀಪ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿದ್ದು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ್ದಾರೆ. ಅದೇ ವೇಳೆ ವ್ಯಕ್ತಿಯೊಬ್ಬನಿಗೆ ಲಾಂಗ್‍ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಅದೇ ವೇಳೆ ರಸ್ತೆಯಲ್ಲಿದ್ದ ವಾಹನವೊಂದರ ಗಾಜು ಪುಡಿ ಮಾಡಿ ಚಾಲಕನಿಗೆ ಜೀವ ಬೆದರಿಕೆ ಹಾಕಿದ್ದಾರೆ.
ಈ ಘಟನೆಯನ್ನು ಶ್ರೀಕಾಂತ್ ಎಂಬಾತ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ದುಷ್ಕರ್ಮಿಗಳು ಅವರ ಮೇಲೆ ಸಹ ಹಲ್ಲೆ ನಡೆಸಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೋಲೀಸರು ವಿವರಿಸಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೋಲೀಸ್ ಇಲಾಖೆ ಪ್ರಕರಣ ನಡೆದ ಎಂಟು ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT