ಸಾಂದರ್ಭಿಕ ಚಿತ್ರ 
ರಾಜ್ಯ

ಬತ್ತಿಹೋಗುತ್ತಿರುವ ನೀರಿನ ಸೆಲೆ; ಹೆಚ್ಚುತ್ತಿದೆ ಮಾನವ-ಪ್ರಾಣಿಗಳ ಸಂಘರ್ಷ

ವಾತಾವರಣದಲ್ಲಿ ಉಷ್ಣಾಂಶ ತಾರಕಕ್ಕೇರುತ್ತಿದ್ದಂತೆ ಜಲಾಶಯಗಳಲ್ಲಿ, ಕೆರೆ, ಕೊಳ್ಳಗಳಲ್ಲಿ ನೀರಿನ ಮಟ್ಟ ...

ಬೆಂಗಳೂರು: ವಾತಾವರಣದಲ್ಲಿ ಉಷ್ಣಾಂಶ ತಾರಕಕ್ಕೇರುತ್ತಿದ್ದಂತೆ ಜಲಾಶಯಗಳಲ್ಲಿ, ಕೆರೆ, ಕೊಳ್ಳಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದಂತೆ ರಕ್ಷಿತಾರಣ್ಯ ಪ್ರದೇಶಗಳಲ್ಲಿರುವ ವನ್ಯಜೀವಿಗಳು ಬೇರೆ ಪ್ರದೇಶಕ್ಕೆ ವಲಸೆ ಹೋಗುತ್ತವೆ ಇಲ್ಲವೇ ಮಾನವನ ಆವಾಸಸ್ಥಾನಗಳೆಡೆಗೆ ಲಗ್ಗೆಯಿಡುತ್ತವೆ.
ಇದರಿಂದ ಮಾನವ-ಪ್ರಾಣಿಗಳ ಮಧ್ಯೆ ಸಂಘರ್ಷವೇರ್ಪಡುತ್ತವೆ. ರಾಜ್ಯದ ಮಲೆನಾಡು ಭಾಗಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಆನೆಗಳ ಹಿಂಡು ಮತ್ತು ಇತರ ವನ್ಯಜೀವಿಗಳು ಆಹಾರ, ನೀರು ಹುಡುಕಿಕೊಂಡು ಕಾಫಿ, ಅಡಕೆ, ಬಾಳೆ ತೋಟಕ್ಕೆ ತಗ್ಗೆಯಿಟ್ಟು ದಾಂಧಲೆ ಮಾಡುತ್ತಿವೆ ಎಂಬ ಕೂಗು ಕೇಳಿಬರುತ್ತಿದೆ.
ದಾಂಡೇಲಿ, ಬಂಡೀಪುರ, ಎಂಎಂ ಹಿಲ್ಸ್, ನಾಗರಹೊಳೆ ಇತ್ಯಾದಿ ದಟ್ಟಾರಣ್ಯಗಳಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿಲ್ಲ. ಶೇಕಡಾ 50ರಿಂದ 60 ನೀರಿನ ಸೆಲೆಗಳಲ್ಲಿ ಇನ್ನೂ ಸಾಕಷ್ಟು ನೀರಿದ್ದು ಮಾನ್ಸೂನ್ ವರೆಗೆ ಪರಿಸ್ಥಿತಿ ನಿಭಾಯಿಸಬಹುದು ಎನ್ನುತ್ತಾರೆ ಅರಣ್ಯಾಧಿಕಾರಿಗಳು.
ಕಳೆದ ಎರಡು ವಾರಗಳಿಂದೀಚೆಗೆ ಕೊಡಗು ಜಿಲ್ಲೆಯ ಕಲತಮಾಡುವಿನಲ್ಲಿ ಒಂದು ಆನೆ ಮೃತಪಟ್ಟಿದ್ದು ಚಿಕ್ಕಮಗಳೂರಿನ ಮಲ್ಲೇನಹಳ್ಳಿಯಲ್ಲಿ ಮತ್ತೊಂದು ಆನೆ ಮನುಷ್ಯನನ್ನು ಕೊಂದುಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ