ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ 8 ಬಾಲಕಿಯರ ರಕ್ಷಣೆ

ಕೆಂಗೇರಿಯಲ್ಲಿ ಎಂಜಿನಿಯರಿಂಗ್ ಪದವೀಧರರು ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ ಕನಿಷ್ಠ 8 ಮಂದಿ ...

ಬೆಂಗಳೂರು: ಕೆಂಗೇರಿಯಲ್ಲಿ ಎಂಜಿನಿಯರಿಂಗ್ ಪದವೀಧರರು ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ ಕನಿಷ್ಠ 8 ಮಂದಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದೆ.
ಆಶ್ರಮದ ಮಾಲೀಕ 40 ವರ್ಷದ ಜಾದೂಗಾರ ಆಗಿದ್ದು ಆತ ಆಶ್ರಮದಲ್ಲಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾನೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪೊಕ್ಸೊ ಕಾಯ್ದೆಯಡಿ ಕೇಸು ದಾಖಲಿಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣವರ್, ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ನಾವು ಕೇಸು ದಾಖಲಿಸಿದ್ದೇವೆ. ತನಿಖೆ ಮುಂದುವರಿಸಿದ್ದೇವೆ. ಕೆಂಗೇರಿ ಗೇಟ್ ಉಪ ವಿಭಾಗದ ಎಸಿಪಿಯವರಿಗೆ ಕೇಸಿನ ತನಿಖೆ ವಹಿಸಿದ್ದೇವೆ ಎಂದರು.
ಆಶ್ರಮದಿಂದ ತಪ್ಪಿಸಿಕೊಂಡು ಬಂದು ಚಾಮರಾಜನಗರ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿದ ಬಾಲಕಿಯೊಬ್ಬಳು ನೀಡಿದ ಮಾಹಿತಿ ಪಡೆದ ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯರು ನೀಡಿದ್ದ ದೂರಿನ ಮೇರೆಗೆ ನಗರ ಪೊಲೀಸರು ಆಶ್ರಮಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ.
ಈ ಬಾಲಕಿ ಮಾತ್ರ ದೂರು ಸಲ್ಲಿಸಿದ್ದು ಬೇರೆ ಬಾಲಕಿಯವರು ಯಾವುದೇ ದೂರು ನೀಡಿಲ್ಲ, ಹೀಗಾಗಿ ತನಿಖೆ ನಡೆಸಿಯೇ ನಾವು ತೀರ್ಮಾನಕ್ಕೆ ಬರುತ್ತೇವೆ ಎನ್ನುತ್ತಾರೆ ಹಿರಿಯ ಪೊಲೀಸ್ ಅಧಿಕಾರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT