ಕುಮಾರಸ್ವಾಮಿ-ಕಾಂಗ್ರೆಸ್ ನಾಯಕರು 
ರಾಜ್ಯ

ಐಟಿ ದಾಳಿ ವಿರುದ್ಧ ಬೀದಿಗಿಳಿದು ರಂಪಾಟ; ಆದರೆ ಸಿಎಂ ಆಪ್ತನ ಬಳಿ ಸಿಕ್ಕಿದ್ದು ಬರೋಬ್ಬರಿ 6 ಕೋಟಿ ರು.!

ವಿನಾಃ ಕಾರಣ ಮೈತ್ರಿ ಸರ್ಕಾರದ ನಾಯಕರ ಮೇಲೆ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಘಟಾನುಘಟಿ ನಾಯಕರು ಬೀದಿಗಿಳಿದು...

ಬೆಂಗಳೂರು: ವಿನಾಃ ಕಾರಣ ಮೈತ್ರಿ ಸರ್ಕಾರದ ನಾಯಕರ ಮೇಲೆ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಘಟಾನುಘಟಿ ನಾಯಕರು ಬೀದಿಗಿಳಿದು ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಇದೀಗ ಐಟಿ ದಾಳಿಯಲ್ಲಿ ಸಿಎಂ ಆಪ್ತ ಪರಮೇಶ್ ಅವರ ಬ್ಯಾಂಕ್ ಲಾಕರ್ ನಲ್ಲಿ ಬರೋಬ್ಬರಿ 6 ಕೋಟಿ ರುಪಾಯಿ ಸಿಕ್ಕಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. 
ಕೆಲ ದಿನಗಳ ಹಿಂದೆ ಪರಮೇಶ್ ಅವರ ಮನೆ ಮೇಲೆ ಐಟಿ ದಾಳಿ ನಡೆಸಿತ್ತು. ಈ ವೇಳೆ ಬ್ಯಾಂಕ್ ಲಾಕರ್ ಕೀ ಕಳೆದುಹೋಗಿದೆ ಎಂದು ಪರಮೇಶ್ ಹೇಳಿಕೊಂಡಿದ್ದರು. ದಾಳಿ ಬಳಿಕ ಪರಮೇಶ್ ಅವರ ಬ್ಯಾಂಕ್ ವಿವರವನ್ನು ಐಟಿ ಸಂಗ್ರಹ ಮಾಡಿತ್ತು. ಅಷ್ಟೇ ಅಲ್ಲ. ಬ್ಯಾಂಕ್ ಲಾಕರ್ ಒಡೆಯುತ್ತೇವೆ ಎಂದು ಐಟಿ ಅಧಿಕಾರಿಗಳು ಹೇಳಿದ್ದರು. 
ಇದರಿಂದ ಹೆದರಿದ ಪರಮೇಶ್ ಅವರು ಲಾಕರ್ ಕೀ ನೀಡಿದ್ದರು. ಲಾಕರ್ ತೆಗೆದ ಸಂದರ್ಭದಲ್ಲಿ 6 ಕೋಟಿ ರುಪಾಯಿ ಪತ್ತೆಯಾಗಿದೆ. ಗುತ್ತಿಗೆದಾರರಿಂದ ಪರಮೇಶ್ ಹಣ ಸಂಗ್ರಹ ಮಾಡುತ್ತಿದ್ದರು ಎಂದು ಹೇಳಲಾಗಿದೆ. 
ಇನ್ನು ಬಿಜೆಪಿಯವರು ಚುನಾವಣೆ ಗೆಲ್ಲಲು ನಮ್ಮ ವಿರುದ್ಧ ತಂತ್ರ ಹೂಡಿ ಐಟಿ ದಾಳಿ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿತ್ತು. ಆದರೆ ಇಷ್ಟು ಪ್ರಮಾಣದ ಹಣ ಸಿಕ್ಕಿರುವುದು ಜೆಡಿಎಸ್ ನಾಯಕರಿಗೆ ತೀವ್ರ ಹಿನ್ನಡೆ ಉಂಟು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT