ಕುಮಾರಸ್ವಾಮಿ-ಕಾಂಗ್ರೆಸ್ ನಾಯಕರು 
ರಾಜ್ಯ

ಐಟಿ ದಾಳಿ ವಿರುದ್ಧ ಬೀದಿಗಿಳಿದು ರಂಪಾಟ; ಆದರೆ ಸಿಎಂ ಆಪ್ತನ ಬಳಿ ಸಿಕ್ಕಿದ್ದು ಬರೋಬ್ಬರಿ 6 ಕೋಟಿ ರು.!

ವಿನಾಃ ಕಾರಣ ಮೈತ್ರಿ ಸರ್ಕಾರದ ನಾಯಕರ ಮೇಲೆ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಘಟಾನುಘಟಿ ನಾಯಕರು ಬೀದಿಗಿಳಿದು...

ಬೆಂಗಳೂರು: ವಿನಾಃ ಕಾರಣ ಮೈತ್ರಿ ಸರ್ಕಾರದ ನಾಯಕರ ಮೇಲೆ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಘಟಾನುಘಟಿ ನಾಯಕರು ಬೀದಿಗಿಳಿದು ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಇದೀಗ ಐಟಿ ದಾಳಿಯಲ್ಲಿ ಸಿಎಂ ಆಪ್ತ ಪರಮೇಶ್ ಅವರ ಬ್ಯಾಂಕ್ ಲಾಕರ್ ನಲ್ಲಿ ಬರೋಬ್ಬರಿ 6 ಕೋಟಿ ರುಪಾಯಿ ಸಿಕ್ಕಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. 
ಕೆಲ ದಿನಗಳ ಹಿಂದೆ ಪರಮೇಶ್ ಅವರ ಮನೆ ಮೇಲೆ ಐಟಿ ದಾಳಿ ನಡೆಸಿತ್ತು. ಈ ವೇಳೆ ಬ್ಯಾಂಕ್ ಲಾಕರ್ ಕೀ ಕಳೆದುಹೋಗಿದೆ ಎಂದು ಪರಮೇಶ್ ಹೇಳಿಕೊಂಡಿದ್ದರು. ದಾಳಿ ಬಳಿಕ ಪರಮೇಶ್ ಅವರ ಬ್ಯಾಂಕ್ ವಿವರವನ್ನು ಐಟಿ ಸಂಗ್ರಹ ಮಾಡಿತ್ತು. ಅಷ್ಟೇ ಅಲ್ಲ. ಬ್ಯಾಂಕ್ ಲಾಕರ್ ಒಡೆಯುತ್ತೇವೆ ಎಂದು ಐಟಿ ಅಧಿಕಾರಿಗಳು ಹೇಳಿದ್ದರು. 
ಇದರಿಂದ ಹೆದರಿದ ಪರಮೇಶ್ ಅವರು ಲಾಕರ್ ಕೀ ನೀಡಿದ್ದರು. ಲಾಕರ್ ತೆಗೆದ ಸಂದರ್ಭದಲ್ಲಿ 6 ಕೋಟಿ ರುಪಾಯಿ ಪತ್ತೆಯಾಗಿದೆ. ಗುತ್ತಿಗೆದಾರರಿಂದ ಪರಮೇಶ್ ಹಣ ಸಂಗ್ರಹ ಮಾಡುತ್ತಿದ್ದರು ಎಂದು ಹೇಳಲಾಗಿದೆ. 
ಇನ್ನು ಬಿಜೆಪಿಯವರು ಚುನಾವಣೆ ಗೆಲ್ಲಲು ನಮ್ಮ ವಿರುದ್ಧ ತಂತ್ರ ಹೂಡಿ ಐಟಿ ದಾಳಿ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿತ್ತು. ಆದರೆ ಇಷ್ಟು ಪ್ರಮಾಣದ ಹಣ ಸಿಕ್ಕಿರುವುದು ಜೆಡಿಎಸ್ ನಾಯಕರಿಗೆ ತೀವ್ರ ಹಿನ್ನಡೆ ಉಂಟು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT