ಮನೆಯೊಡತಿ 64 ವರ್ಷದ ವೃದ್ಧೆ ಇಂದ್ರಾಣಿ 
ರಾಜ್ಯ

ಯಡಿಯೂರಪ್ಪ ಸ್ಲಂ ವಾಸ್ತವ್ಯ: ಮನೆ ಮಾಲೀಕರಿಗೆ ಟಾಯ್ಲೆಟ್ ತಂದ ನಷ್ಟ!

ರಾಜಕೀಯ ನಾಯಕರ ನಡುವಿನ ಕಿತ್ತಾಟದಿಂದ ಸಾಮಾನ್ಯ ಜನತೆಯ ಬದುಕು ಎಷ್ಟು ಹೈರಾಣಾಗಿ ...

ಬೆಂಗಳೂರು: ರಾಜಕೀಯ ನಾಯಕರ ನಡುವಿನ ಕಿತ್ತಾಟದಿಂದ ಸಾಮಾನ್ಯ ಜನತೆಯ ಬದುಕು ಎಷ್ಟು ಹೈರಾಣಾಗಿ ಹೋಗುತ್ತದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ.
ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ಕೊಳಚೆ ನಿವಾಸಿಗಳ ಸಮಸ್ಯೆ ಮತ್ತು ಅವರ ಬೇಡಿಕೆಗಳನ್ನು ತಿಳಿಯಲೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ಒಂದು ರಾತ್ರಿ ಗಾಂಧಿನಗರದ ಲಕ್ಷ್ಮಣಪುರಿ ಕೊಳಗೇರಿಯ ನಿವಾಸಿ ಆಟೋಚಾಲಕ ಮುನಿರತ್ನ ಎಂಬವರ 22*12 ಅಡಿಯ ಸಣ್ಣ ಮನೆಯಲ್ಲಿ ಉಳಿದುಕೊಂಡಿದ್ದರು.
ಸಿಮೆಂಟ್ ಶೀಟ್ ನ ಮನೆಯಲ್ಲಿ ಒಂದು ರೂಂ, ಸಣ್ಣ ಹಾಲ್, ಕಿಚನ್ ಮತ್ತು ಬಾತ್ ರೂಂ ಮತ್ತು ಇಂಡಿಯನ್ ಸ್ಟೈಲ್ ಶೌಚಾಲಯವಿದೆ. ಈ ಮನೆಯಲ್ಲಿ ಭಾರತೀಯ ಶೈಲಿನ ಶೌಚಾಲಯವಿರುವುದರಿಂದ ಯಡಿಯೂರಪ್ಪನವರಿಗೆ ಕಷ್ಟವಾಗುತ್ತದೆ ಎಂದು ವೆಸ್ಟರ್ನ್ ಕಮೋಡ್ ಬೇಕೆಂದು ಬಿಜೆಪಿ ಕಾರ್ಯಕರ್ತರು ಕಟ್ಟಿಸಿದರು.
ಕೆಲವೇ ದಿನಗಳಲ್ಲಿ ಸಿದ್ದವಾಯಿತು. ಬಿಜೆಪಿಯೇ ಅದರ ವೆಚ್ಚವನ್ನು ಭರಿಸಿತು. ಯಡಿಯೂರಪ್ಪನವರು ಆ ಮನೆಯಲ್ಲಿ ಒಂದು ರಾತ್ರಿ ಕಳೆದ ನಂತರ ಹೋದವರು ಮತ್ತೆ ಅಲ್ಲಿನ ಜನರನ್ನು ಸಂಪರ್ಕಿಸಲಿಲ್ಲ. ವೆಸ್ಟರ್ನ್ ಶೈಲಿಯಲ್ಲಿ ಕಟ್ಟಿಸಿದ ಕಮೋಡ್ ಮನೆಯವರಿಗೆ ಇಷ್ಟವಾಗಲಿಲ್ಲ, ಅದನ್ನು ಬಳಸಲು ಸರಿಯಾಗದೆ ತೆಗೆದು ಇಂಡಿಯನ್ ಶೈಲಿಯಲ್ಲಿ ಕಟ್ಟಿಸಿದರು.
ಈ ಮನೆಯ 64 ವರ್ಷದ ವೃದ್ಧೆ ಇಂದ್ರಾಣಿ ತನ್ನ ಮಗ, ಸೊಸೆ ಮತ್ತು ಮೊಮ್ಮಕ್ಕಳೊಂದಿಗೆ ನೆಲೆಸಿದ್ದಾರೆ, ''ನಮಗೆ ವೆಸ್ಟರ್ನ್ ಶೈಲಿಯ ಕಮೋಡ್ ಬಳಸಿ ಗೊತ್ತಿಲ್ಲ, ಅದರಲ್ಲಿ ಕೂರಲು ಹೋಗಿ ಬಿದ್ದು ನಾನು ಏಟು ಮಾಡಿಕೊಂಡೆ. ಹಾಗಾಗಿ ಅದನ್ನು ತೆಗೆದು ಹಳೆ ಶೈಲಿಯಲ್ಲಿ ಮಾಡಿಸಿಕೊಂಡೆವು, 15 ಸಾವಿರ ರೂಪಾಯಿ ಖರ್ಚಾಯಿತು, ಸ್ಥಳೀಯ ನಾಯಕರನ್ನು ಕೇಳಿದರೆ 4 ಸಾವಿರ ರೂಪಾಯಿ ಕೊಟ್ಟರು. ಉಳಿದ 11 ಸಾವಿರ ರೂಪಾಯಿ ನಾವೇ ಭರಿಸಬೇಕು ಎಂದರು ಇಂದ್ರಾಣಿ.
ಬೆಂಗಳೂರಿನಲ್ಲಿರುವ ಬೇರೆ ಕೊಳಚೆ ಪ್ರದೇಶಗಳಂತೆ ಲಕ್ಷ್ಮಣಪುರಿಯಲ್ಲಿ ಕೂಡ ಹತ್ತಾರು ಸಮಸ್ಯೆಗಳಿವೆ. ಕುಡಿಯುವ ನೀರು, ಪದೇ ಪದೇ ವಿದ್ಯುತ್ ಕಡಿತ, ರಸ್ತೆ ದುರವಸ್ಥೆ. ಮುನಿರತ್ನ ಅವರಿಗೆ ಈ ಹಿಂದೆ ಶೌಚಾಲಯದ ಸಮಸ್ಯೆಯಿರಲಿಲ್ಲ. ಯಡಿಯೂರಪ್ಪನವರು ಬಂದು ಒಂದು ರಾತ್ರಿ ಅವರ ಮನೆಯಲ್ಲಿ ವಾಸಿಸಿದ ಮೇಲೆ ಇಷ್ಟೆಲ್ಲಾ ಸಮಸ್ಯೆಗಳು ಬಂದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT