ಭದ್ರಾ ಹುಲಿ ಮೀಸಲು ಅರಣ್ಯ 
ರಾಜ್ಯ

ಭದ್ರಾ ನದಿ ದಂಡೆಯಲ್ಲಿ ಡ್ರೋನ್ ಕ್ಯಾಮರಾ ಮೂಲಕ ಚಿತ್ರೀಕರಣ; ಕಡಲಹಕ್ಕಿ ಸಾವು, ಪರಿಸರವಾದಿಗಳಲ್ಲಿ ಆತಂಕ

ಕಳೆದ ವಾರ ಇಲ್ಲಿನ ಭದ್ರಾ ನದಿ ದಂಡೆಯಲ್ಲಿ ಚಿತ್ರತಂಡ ಶೂಟಿಂಗ್ ಮಾಡುವ ಸಂದರ್ಭದಲ್ಲಿ ಬಳಸಲಾಗಿದ್ದ...

ಶಿವಮೊಗ್ಗ: ಕಳೆದ ವಾರ ಇಲ್ಲಿನ ಭದ್ರಾ ನದಿ ದಂಡೆಯಲ್ಲಿ ಚಿತ್ರತಂಡ ಶೂಟಿಂಗ್ ಮಾಡುವ ಸಂದರ್ಭದಲ್ಲಿ ಬಳಸಲಾಗಿದ್ದ ಡ್ರೋನ್ ನಿಂದ ಕಡಲ ಹಕ್ಕಿಯೊಂದು ಸಿಕ್ಕಿ ಸತ್ತು ಹೋಗಿತ್ತು. ಇದು ಇಲ್ಲಿನ ವನ್ಯಜೀವಿ ಪ್ರಾಣಿ-ಪಕ್ಷಿ ಸಂಕುಲದ ಜೀವ ರಕ್ಷಣೆಯ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ. ಸ್ಥಳೀಯ ಪರಿಸರವಾದಿಗಳನ್ನು ಆತಂಕಕ್ಕೀಡುಮಾಡಿದೆ.
ಈ ಘಟನೆ ನಡೆಯುವಾಗ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಇದ್ದರು. ಹಕ್ಕಿ ಸತ್ತಿದ್ದು ಮಾತ್ರವಲ್ಲದೆ ಇಡೀ ಡ್ರೋನ್ ಕ್ಯಾಮರಾ ನಾಶವಾಗಿತ್ತು. ಆದರೆ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ಕೂಡ ನಡೆಯಿತು.
ಕಳೆದ ವಾರ ಭದ್ರಾ ನದಿ ತೀರದ ಲಕ್ಕವಳ್ಳಿ ದ್ವೀಪದಲ್ಲಿ ಹಲವು ಜೀವ ಪ್ರಬೇಧಗಳ ವೈವಿಧ್ಯತೆಯನ್ನು ಸೆರೆಹಿಡಿಯಲು ಚಿತ್ರತಂಡ ಸಜ್ಜಾಗಿತ್ತು. ಅರಣ್ಯ ಇಲಾಖೆ ಮತ್ತು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ಗಳು ಬೋಟ್ ಸಫಾರಿ ನಡೆಸುತ್ತದೆ. ಚಿತ್ರತಂಡವನ್ನು ಕರೆದುಕೊಂಡು ಬೋಟ್ ಸಫಾರಿ ನಡೆಸುತ್ತಿದ್ದಾಗ ಅರಣ್ಯ ಅಧಿಕಾರಿಗಳು, ಉಪಕರಣಗಳು ಮತ್ತು ಡ್ರೋನ್ ಕ್ಯಾಮರಾವನ್ನು ಬಳಸಲಾಗಿತ್ತು. 
ವನ್ಯಜೀವಿ ಕರ್ನಾಟಕ ಅಥವಾ ಬೇರೆ ಯಾವುದಾದರೂ ಸಿನಿಮಾಕ್ಕಾಗಿ ಇಲ್ಲಿ ಶೂಟಿಂಗ್ ಮಾಡಲಾಗಿತ್ತಾ ಎಂಬ ಬಗ್ಗೆ ಮಾಹಿತಿಯಿಲ್ಲ. ಲಕ್ಕವಳ್ಳಿ ದ್ವೀಪದ ಸುತ್ತಮುತ್ತ ಸಾವಿರಾರು ಪ್ರಾಣಿ ಪಕ್ಷಿ ಸಂಕುಲಗಳು ಬೀಡುಬಿಟ್ಟಿವೆ. ಇಲ್ಲಿ ಶೂಟಿಂಗ್ ನಡೆಸಲು ಅರಣ್ಯ ಇಲಾಖೆ ಅನುಮತಿ ನೀಡಿತ್ತೇ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ. ಚಿತ್ರತಂಡ ಭದ್ರಾ ನದಿ ದಂಡೆಯ ಹುಲ್ಲಿನ ಹಾಸಿನ ಮೇಲೆ ಶೂಟಿಂಗ್ ಮಾಡಿದೆ. ಆದರೆ ಅಲ್ಲಿ ಅನುಮತಿ ನೀಡಿದ್ದಾರೆಯೇ ಇಲ್ಲವೇ ಎಂದು ನನಗೆ ಸಂಶಯವಿದೆ ಎನ್ನುತ್ತಾರೆ ಅರಣ್ಯ ಸಂರಕ್ಷಣೆ ಹೋರಾಟಗಾರರೊಬ್ಬರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT