ರಾಜ್ಯ

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

Raghavendra Adiga
ಬೆಳಗಾವಿ: ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಶಾಸಕಿಯ ತಲೆಗೆ ಗಂಬೀರ ಗಾಯಗಳಾಗಿದೆ.ಶುಕ್ರವಾರ ಮಧ್ಯಾಹ್ನ ಮಹಾರಾಷ್ಟ್ರದ ಕೊಲ್ಲಾಪುರದಿಂದ ನಾದೇಡ್ ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ನಂತರ ಆಕೆಯನ್ನು ಸೋಲಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬ ಮೂಲಗಳು ಹೇಳಿದೆ.
ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಅಂಜಲಿ ಕೊಲ್ಲಾಪುರದ ನಾಂದೇಡ್ ನಲ್ಲಿ ಚುನಾವಣಾ ಅಭಿಯಾನಕ್ಕೆ ತೆರಳಿದ್ದರು
ಚಾಲಕ ಮಹಾದೇವ ಹಾಗೂ ಗನ್ ಮ್ಯಾನ್ ಸೈಯದ್ ಸಹ ಅಪಘಾತದಲ್ಲಿ ಗಾಯಗೊಂಡಿದ್ದು ಅವರೂ ಆಸ್ಪತ್ರೆಗೆ ದಾಖಲಾಗಿ ಚಿಕ್ತ್ಸೆ ಪಡೆಯುತ್ತಿದ್ದಾರೆ. ಶಾಸಕಿ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂಡ ಪಾರಾಗಿದ್ದಾರೆ ಎಂದು ಮೂಲಗಳು ಹೇಳಿದೆ.
ಕಾರುಗಳ ನಡುವಿನ ಮುಖಾಮುಖಿ ಡಿಕ್ಕಿಯನ್ನು ತಪ್ಪಿಸಲು ಹೋದಾಗ ಶಾಸಕಿ ಅಂಜಲಿ ಅವರ ಕಾರು ಪಲ್ಟಿಯಾಗಿದೆ.
SCROLL FOR NEXT