ನಳಿನ್ ಕುಮಾರ್ ಕಟೀಲ್ 
ರಾಜ್ಯ

ಪಿಯುಸಿ ಫಲಿತಾಂಶದಲ್ಲಿ ಕರಾವಳಿಗರೇ ಫರ್ಸ್ಟ್, ಈಗಾದ್ರೂ ಸಿಎಂ ಕ್ಷಮೆ ಕೇಳಲಿ: ಸಂಸದ ಕಟೀಲ್

ಸೋಮವಾರ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ.ಈ ಸಾಲಿನಲ್ಲಿಯೂ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದು ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಗಳಿಸಿದೆ

ಮಂಗಳೂರು: ಸೋಮವಾರ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ.ಈ ಸಾಲಿನಲ್ಲಿಯೂ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದು ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಗಳಿಸಿದೆ.  ಆದರೆ ಪಿಯುಸಿ ಫಲಿತಾಂಶವನ್ನೂ ರಾಜಕೀಯಕ್ಕೆ ಎಳೆತಂದು ಸಂಸದ ನಳಿನ್ ಕುಮಾರ್ ಕಟೀಲ್ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.
ಪಿಯುಸಿಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಅತ್ಯುತ್ತಮ ಸಾಧನೆ ಮಾಡಿದೆ. ಈಗಲಾದರೂ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯವರು ತಿಳುವಳಿಕೆ ಇಲ್ಲದವರು ಎಂಬ ಹೇಳಿಕೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಕ್ಷಮೆ ಕೇಳಲಿ ಎಂದು ಸಂಸದ ಕಟೀಲ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಂಸದ ಕಟೀಲ್ "ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸಿದ ಉಡುಪಿ - ದಕ್ಷಿಣ ಕನ್ನಡ ರಾಜ್ಯದಲ್ಲೇ ಉಡುಪಿ ಪ್ರಥಮ ಸ್ಥಾನ ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಮುಖ್ಯಮಂತ್ರಿಯವರೇ.. ಇದನ್ನೂ ನೋಡಿಯೂ ಉಡುಪಿ- ದಕ್ಷಿಣ ಕನ್ನಡದ ಜನಗಳು ತಿಳುವಳಿಕೆ ಇಲ್ಲದವರೂ ಅಂತೀರಾ.. ಕ್ಷಮೆ ಕೇಳುವ ಸಮಯ .." ಎಂದು ಬರೆದುಕೊಂಡಿದ್ದಾರೆ.
ಇಂದು ಪ್ರಕಟವಾಗಿರುವ ಕರ್ನಾಟಕ ಪಿಯುಸಿ ಫಲಿತಾಂಶದಲ್ಲಿ ಉಡುಪಿ 92.20 ಶೇ. ದೊಡನೆ ಪ್ರಥಮ ಸ್ಥಾನ ಪಡೆದರೆ ದಕ್ಷಿಣ ಕನ್ನಡ 90.91 ಶೇ. ಫಲಿತಾಂಶದೊಡನೆ ದ್ವಿತೀಯ ಸ್ಥಾನ ಪಡೆದಿದೆ. 83.31 ಶೇ. ಫಲಿತಾಂಶದೊಡನೆ ಕೊಡಗು ಮೂರನೇ ಸ್ಥಾನದಲ್ಲಿದ್ದರೆ ಉತ್ತರ ಕನ್ನಡ (79.59 ಶೇ.) ಹಾಗೂ ಚಿಕ್ಕಮಗಲೂರು (76.42 ಶೇ.) ಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿವೆ.ಶೇ.50.42 ಫಲಿತಾಂಶದೊಡನೆ ಚಿತ್ರದುರ್ಗ ಕಡೇ ಸ್ಥಾನದಲ್ಲಿದೆ.
ಸಿಎಂ ಹೇಳಿದ್ದೇನು?
ಕರಾವಳಿ  ಭಾಗದ ಉಡುಪಿ, ಕಾರ್ಕಳ ಕಾಪು ಜನತೆಗೆ ತಿಳುವಳಿಕೆ ಇಲ್ಲ, ಅಲ್ಲಿನ ಜನರು ಬಿಜೆಪಿಗೆ ಮಾತ್ರ ಮತ ಹಾಕುತ್ತಾರೆ. ಅವರಿಗೆ ಶಾಲೆ, ಕಾಲೇಜು ಕಟ್ಟಿಸಿಕೊಡೋಕೆ ಮಾತ್ರ ಕುಮಾರಸ್ವಾಮಿ, ರೇವಣ್ಣನೇ ಬೇಕು ಎಂದು ಕರಾವಳಿ ಭಾಗದ ಜನರನ್ನು ತೆಗಳಿದ್ದರು. ಮಾರಸ್ವಾಮಿ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT