ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಅರೆಸ್ಟ್

ಜನರಿಗೆ ಡ್ರಾಪ್ ಕೊಡುವ ನೆಪದಲ್ಲಿ ಸಾರ್ವಜನಿಕರ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಒಂದನ್ನು ಬೆಂಗಳೂರು ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜನರಿಗೆ ಡ್ರಾಪ್ ಕೊಡುವ ನೆಪದಲ್ಲಿ  ಸಾರ್ವಜನಿಕರ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಒಂದನ್ನು ಬೆಂಗಳೂರು ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ. ಕಳೆದ ವಾರ ಈ ಗ್ಯಾಂಗ್ ಕೇರಳ ಮೂಲದ ಎಂಎನ್ ಸಿ ಉದ್ಯೋಗಿಯೊಬ್ಬನನ್ನು ಅಪಹರಿಸಿ ಲೂಟಿ ಮಾಡಿದೆ.
ಬಂಧಿತರನ್ನು ಅಬು ಸುಲೇಮಾನ್ (24), ಖಲಂದರ್ (19,), ಸಲೀಂ ಪಾಷಾ ( 23) ಹಾಗೂ ಅಬ್ದುಲ್ ಸಾಹಿಲ್ (20) ಎಂದು ಗುರುತಿಸಲಾಗಿದೆ.ಇವರೆಲ್ಲರೂ ಚಂದ್ರಾ ಲೇಔಟ್ ನಿವಾಸಿಗಳಾಗಿದ್ದಾರೆ.ಈ ಹಿಂದೆ ಇದೇ ಗ್ಯಾಂಗ್ ಕೆಂಗೇರಿ, ಕೋಡಿಗೆಹಳ್ಳಿ ಹಾಗೂ ಮದ್ದೂರು ಪ್ರದೇಶದಲ್ಲಿ ಸಕ್ರಿಯವಾಗಿತ್ತು. ಇವರ ಬಂಧನದಿಂಡ ನಾಲ್ಕು ಇದೇ ಬಗೆಯ ಪ್ರಕರಣಗಳು ಪರಿಹಾರವಾಗಿದ್ದವು.
ನಾವು ಅಪಹರಣಕ್ಕೆ ಬಳಸಿದ್ದ ಕಾರ್ ಮಾಲೀಕರಾದ ಮುಕುಬ್ ಸಾಲುಕ್ಕರ್ ಅವರನ್ನು ವಿಚಾರಣೆ ನಡೆಸಿದೆವು, ಆಗ ಆ ವ್ಯಕ್ತಿ ಈ ಆರೋಪಿಗಳ ಹೆಸರನ್ನು ಹೇಳಿದ್ದ. ಆರೋಪಿಗಳು ಇವರಿಂದ ತಿಂಗಳಿಗೆ  20,ಸಾವಿರ ರು. ಬಾಡಿಗೆಗಾಗಿ ಈ ಕಾರ್ ಪಡೆದಿದ್ದರು.ಈಗ ಈ ಆರೋಪಿಗಳ ಮನೆ ಶೋಧಕಾರ್ಯ ಕೈಗೊಂಡಿದ್ದು ಮನೆಯಲ್ಲಿ ಚಿನ್ನ ಹಾಗೂ ಇತರೆ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾಗಿ ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT