ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಅರೆಸ್ಟ್

ಜನರಿಗೆ ಡ್ರಾಪ್ ಕೊಡುವ ನೆಪದಲ್ಲಿ ಸಾರ್ವಜನಿಕರ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಒಂದನ್ನು ಬೆಂಗಳೂರು ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜನರಿಗೆ ಡ್ರಾಪ್ ಕೊಡುವ ನೆಪದಲ್ಲಿ  ಸಾರ್ವಜನಿಕರ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಒಂದನ್ನು ಬೆಂಗಳೂರು ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ. ಕಳೆದ ವಾರ ಈ ಗ್ಯಾಂಗ್ ಕೇರಳ ಮೂಲದ ಎಂಎನ್ ಸಿ ಉದ್ಯೋಗಿಯೊಬ್ಬನನ್ನು ಅಪಹರಿಸಿ ಲೂಟಿ ಮಾಡಿದೆ.
ಬಂಧಿತರನ್ನು ಅಬು ಸುಲೇಮಾನ್ (24), ಖಲಂದರ್ (19,), ಸಲೀಂ ಪಾಷಾ ( 23) ಹಾಗೂ ಅಬ್ದುಲ್ ಸಾಹಿಲ್ (20) ಎಂದು ಗುರುತಿಸಲಾಗಿದೆ.ಇವರೆಲ್ಲರೂ ಚಂದ್ರಾ ಲೇಔಟ್ ನಿವಾಸಿಗಳಾಗಿದ್ದಾರೆ.ಈ ಹಿಂದೆ ಇದೇ ಗ್ಯಾಂಗ್ ಕೆಂಗೇರಿ, ಕೋಡಿಗೆಹಳ್ಳಿ ಹಾಗೂ ಮದ್ದೂರು ಪ್ರದೇಶದಲ್ಲಿ ಸಕ್ರಿಯವಾಗಿತ್ತು. ಇವರ ಬಂಧನದಿಂಡ ನಾಲ್ಕು ಇದೇ ಬಗೆಯ ಪ್ರಕರಣಗಳು ಪರಿಹಾರವಾಗಿದ್ದವು.
ನಾವು ಅಪಹರಣಕ್ಕೆ ಬಳಸಿದ್ದ ಕಾರ್ ಮಾಲೀಕರಾದ ಮುಕುಬ್ ಸಾಲುಕ್ಕರ್ ಅವರನ್ನು ವಿಚಾರಣೆ ನಡೆಸಿದೆವು, ಆಗ ಆ ವ್ಯಕ್ತಿ ಈ ಆರೋಪಿಗಳ ಹೆಸರನ್ನು ಹೇಳಿದ್ದ. ಆರೋಪಿಗಳು ಇವರಿಂದ ತಿಂಗಳಿಗೆ  20,ಸಾವಿರ ರು. ಬಾಡಿಗೆಗಾಗಿ ಈ ಕಾರ್ ಪಡೆದಿದ್ದರು.ಈಗ ಈ ಆರೋಪಿಗಳ ಮನೆ ಶೋಧಕಾರ್ಯ ಕೈಗೊಂಡಿದ್ದು ಮನೆಯಲ್ಲಿ ಚಿನ್ನ ಹಾಗೂ ಇತರೆ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾಗಿ ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT