ಪ್ರಜ್ಞಾ ಶೆಟ್ಟಿ 
ರಾಜ್ಯ

ಉಡುಪಿ: ಕನ್ನಡದಲ್ಲಿ ಫೇಲ್ ಆದೆ ಅಂತ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ!

ಸೋಮವಾರ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಲ್ಲಾ ವಿಷಯಗಳಲ್ಲಿ ಮೊದಲ ಸ್ಥಾನದ ಅಂಕ (ಫಸ್ಟ್ ಕ್ಲಾಸ್ ಮಾರ್ಕ್) ಪಡೆದಿದ್ದೂ ಕನ್ನಡದಲ್ಲಿ ಮಾತ್ರ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು....

ಉಡುಪಿ: ಸೋಮವಾರ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಲ್ಲಾ ವಿಷಯಗಳಲ್ಲಿ ಮೊದಲ ಸ್ಥಾನದ ಅಂಕ (ಫಸ್ಟ್ ಕ್ಲಾಸ್ ಮಾರ್ಕ್) ಪಡೆದಿದ್ದೂ ಕನ್ನಡದಲ್ಲಿ ಮಾತ್ರ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ನಾಲ್ಕೂರು ಗ್ರಾಮದಲ್ಲಿ ನಡೆದಿದೆ.
ಬ್ರಹ್ಮಾವರ ನಾಲ್ಕೂರು ಗ್ರಾಮ ನಡ್ಕೇರಿ ಮೇಲ್ಮನೆ ನಿವಾಸಿ ಪ್ರಜ್ಞಾ ಶೆಟ್ಟಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. 
ಪ್ರಜ್ಞಾ, ಬ್ರಹ್ಮಾವರದ ಬೋರ್ಡ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದ್ದಳು. ಸೋಮವಾರ ಫಲಿತಾಶ ಗೋಷಣೆಯಾಗಿದ್ದು ಬೆಂಗಳುರಿನಲ್ಲಿದ್ದ ಆಕೆಯ ಸಂಬಂಧಿಕರು ಫಲಿತಾಂಶ ನೋಡಿದಾಗ ಕನ್ನಡದಲ್ಲಿ 4 ಅಂಕ ಅಗಳಿಸಿ ಅನುತ್ತೀರ್ಣಳಾಗಿದ್ದು ತಿಳಿದಿದೆ.
ಬೇರೆಲ್ಲಾ ವಿಷಗಳಲ್ಲಿ 60ಕ್ಕಿಂತ ಹೆಚ್ಚು ಅಂಕ ಪಡೆದಿದ್ದ ಪ್ರಜ್ಞಾಗೆ  ಕನ್ನಡದಲ್ಲಿ ಕಡಿಮೆ ಅಂಕ ಬಂದಿದ್ದು ಮನಸ್ಸಿಗೆ ಆಘಾತ ನಿಡಿದೆ. ಮನೆಯಲ್ಲಿ ತಾಯಿ, ಅಜ್ಜಿ ಇರುವ ವೇಳೆಯೇ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆ ಕುರಿತು ಹೆಬ್ರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT