ರಾಹುಲ್ ಗಾಂಧಿ 
ರಾಜ್ಯ

ಬಂಡೀಪುರದಲ್ಲಿ ರಾತ್ರಿ ವೇಳೆ ಸಂಚಾರ ನಿರ್ಬಂಧ ಕುರಿತು ರಾಹುಲ್ ಗಾಂಧಿ ಹೇಳಿಕೆ: ಕಾರ್ಯಕರ್ತರ ಆಕ್ರೋಶ

ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧಕ್ಕೆ ಕಾಂಗ್ರೆಸ್ ಅಧ್ಯಕ್ಷ...

ಬೆಂಗಳೂರು: ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ವನ್ಯಜೀವಿ ತಜ್ಞರಿಂದ ಭಾರೀ ಟೀಕೆ ವ್ಯಕ್ತವಾಗಿದೆ.
ಎರಡೂ ರಾಜ್ಯಗಳ ಮಧ್ಯೆ ಈ ವಿಷಯದಲ್ಲಿ ನಡೆಯುತ್ತಿರುವ ಹೋರಾಟದ ಬಗ್ಗೆ ರಾಹುಲ್ ಗಾಂಧಿಯವರಿಗೆ ಮಾಹಿತಿಯಿಲ್ಲ. ಎಂದು ತಜ್ಞರು ಹೇಳುತ್ತಾರೆ. ಕಳೆದ ಬುಧವಾರ ವಯನಾಡಿನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಬಂಡೀಪುರ ಹುಲಿ ಅಭಯಾರಣ್ಯದಲ್ಲಿನ ರಾತ್ರಿ ಸಂಚಾರ ನಿರ್ಬಂಧ ಸಮಸ್ಯೆ ಕುರಿತು ಗಮನಹರಿಸಲಾಗುವುದು ಎಂದು ಹೇಳಿದ್ದರು.
ಬಂಡೀಪುರ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಕಳೆದ 8 ವರ್ಷಗಳಿಂದ ನಿರ್ಬಂಧವಿದೆ. ಕರ್ನಾಟಕ ಸರ್ಕಾರ ಇದಕ್ಕೆ ಬದಲಿ ಮಾರ್ಗವನ್ನು ನೀಡಿದ್ದು ಅದು ಹಗಲು ಮತ್ತು ರಾತ್ರಿಯಿಡೀ ತೆರೆದಿರುತ್ತದೆ.
ವೈಲ್ಡ್ ಲೈಫ್ ಫಸ್ಟ್ ನ ಟ್ರಸ್ಟಿ ಪ್ರವೀಣ್ ಭಾರ್ಗವ್, ರಾತ್ರಿ ವೇಳೆ ಸಂಚಾರ ನಿರ್ಬಂಧ ವಿವಾದ ಸುಪ್ರೀಂ ಕೋರ್ಟ್ ಮುಂದಿದೆ ಎಂದು ರಾಹುಲ್ ಗಾಂಧಿಯವರಿಗೆ ಬಹುಶಃ ಗೊತ್ತಿರಲಿಕ್ಕಿಲ್ಲ. ವನ್ಯಜೀವಿ ಸಂರಕ್ಷಣೆ ದೃಷ್ಟಿಯಿಂದ ನಾವು ಅವರನ್ನು ಈ ವಿಚಾರದಲ್ಲಿ ಮುಂದುವರಿಯದಂತೆ ಒತ್ತಾಯಿಸಬೇಕಾಗಿದೆ. 2008ರಲ್ಲಿ ರಾಹುಲ್ ಗಾಂಧಿಯವರು ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯಗಳಿಗೆ ಭೇಟಿ ಕೊಟ್ಟು ಅವುಗಳ ಸಂರಕ್ಷಣೆಗಾಗಿ ತಮ್ಮ ಬೆಂಬಲ ಸೂಚಿಸಿದ್ದರು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT