ರಾಹುಲ್ ಗಾಂಧಿ 
ರಾಜ್ಯ

ಬಂಡೀಪುರದಲ್ಲಿ ರಾತ್ರಿ ವೇಳೆ ಸಂಚಾರ ನಿರ್ಬಂಧ ಕುರಿತು ರಾಹುಲ್ ಗಾಂಧಿ ಹೇಳಿಕೆ: ಕಾರ್ಯಕರ್ತರ ಆಕ್ರೋಶ

ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧಕ್ಕೆ ಕಾಂಗ್ರೆಸ್ ಅಧ್ಯಕ್ಷ...

ಬೆಂಗಳೂರು: ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ವನ್ಯಜೀವಿ ತಜ್ಞರಿಂದ ಭಾರೀ ಟೀಕೆ ವ್ಯಕ್ತವಾಗಿದೆ.
ಎರಡೂ ರಾಜ್ಯಗಳ ಮಧ್ಯೆ ಈ ವಿಷಯದಲ್ಲಿ ನಡೆಯುತ್ತಿರುವ ಹೋರಾಟದ ಬಗ್ಗೆ ರಾಹುಲ್ ಗಾಂಧಿಯವರಿಗೆ ಮಾಹಿತಿಯಿಲ್ಲ. ಎಂದು ತಜ್ಞರು ಹೇಳುತ್ತಾರೆ. ಕಳೆದ ಬುಧವಾರ ವಯನಾಡಿನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಬಂಡೀಪುರ ಹುಲಿ ಅಭಯಾರಣ್ಯದಲ್ಲಿನ ರಾತ್ರಿ ಸಂಚಾರ ನಿರ್ಬಂಧ ಸಮಸ್ಯೆ ಕುರಿತು ಗಮನಹರಿಸಲಾಗುವುದು ಎಂದು ಹೇಳಿದ್ದರು.
ಬಂಡೀಪುರ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಕಳೆದ 8 ವರ್ಷಗಳಿಂದ ನಿರ್ಬಂಧವಿದೆ. ಕರ್ನಾಟಕ ಸರ್ಕಾರ ಇದಕ್ಕೆ ಬದಲಿ ಮಾರ್ಗವನ್ನು ನೀಡಿದ್ದು ಅದು ಹಗಲು ಮತ್ತು ರಾತ್ರಿಯಿಡೀ ತೆರೆದಿರುತ್ತದೆ.
ವೈಲ್ಡ್ ಲೈಫ್ ಫಸ್ಟ್ ನ ಟ್ರಸ್ಟಿ ಪ್ರವೀಣ್ ಭಾರ್ಗವ್, ರಾತ್ರಿ ವೇಳೆ ಸಂಚಾರ ನಿರ್ಬಂಧ ವಿವಾದ ಸುಪ್ರೀಂ ಕೋರ್ಟ್ ಮುಂದಿದೆ ಎಂದು ರಾಹುಲ್ ಗಾಂಧಿಯವರಿಗೆ ಬಹುಶಃ ಗೊತ್ತಿರಲಿಕ್ಕಿಲ್ಲ. ವನ್ಯಜೀವಿ ಸಂರಕ್ಷಣೆ ದೃಷ್ಟಿಯಿಂದ ನಾವು ಅವರನ್ನು ಈ ವಿಚಾರದಲ್ಲಿ ಮುಂದುವರಿಯದಂತೆ ಒತ್ತಾಯಿಸಬೇಕಾಗಿದೆ. 2008ರಲ್ಲಿ ರಾಹುಲ್ ಗಾಂಧಿಯವರು ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯಗಳಿಗೆ ಭೇಟಿ ಕೊಟ್ಟು ಅವುಗಳ ಸಂರಕ್ಷಣೆಗಾಗಿ ತಮ್ಮ ಬೆಂಬಲ ಸೂಚಿಸಿದ್ದರು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT