ನವಜಾತ ಶಿಶು ರಕ್ಷಿಸಿದ ಸುನೀಲ್ ಕುಮಾರ್ 
ರಾಜ್ಯ

ಬೆಂಗಳೂರು: ಆಟೋ ಚಾಲಕನಿಂದ ಕಸದ ತೊಟ್ಟಿಯಲ್ಲಿದ್ದ ನವಜಾತ ಶಿಶು ರಕ್ಷಣೆ

ಕಸದ ತೊಟ್ಟಿ ಸಮೀಪ ಇರಿಸಿದ್ದ ನವಜಾತ ಶಿಶುವನ್ನು ಆಟೋ ಚಾಲಕರೊಬ್ಬರು ರಕ್ಷಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಬೆಂಗಳೂರು:  ಕಸದ ತೊಟ್ಟಿ ಸಮೀಪ ಇರಿಸಿದ್ದ ನವಜಾತ ಶಿಶುವನ್ನು ಆಟೋ ಚಾಲಕರೊಬ್ಬರು ರಕ್ಷಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಂದಿನಿ ಲೇಔಟ್‌ನ ಸುನೀಲ್‌ ಕುಮಾರ್‌ ಮಗುವನ್ನು ರಕ್ಷಿಸಿದ ಆಟೋ ಚಾಲಕ. ಸುನೀಲ್‌ ಕುಮಾರ್‌ ಶುಕ್ರವಾರ ಬೆಳಗ್ಗೆ 8.15 ಕ್ಕೆ ಸುಮಾರಿಗೆ ಪೀಣ್ಯದ ಇಎಸ್‌ಐ ಆಸ್ಪತ್ರೆ ಬಳಿ ಆಟೋ ಚಾಲನೆ ಮಾಡಿಕೊಂಡು ಹೋಗುವಾಗ ಮೂತ್ರ ವಿಸರ್ಜಿಸಲೆಂದು ಆಟೋ ನಿಲ್ಲಿಸಿದ್ದಾರೆ.
ಈ ವೇಳೆ ಕಸದ ತೊಟ್ಟಿ ಬಳಿ ಮಗುವಿನ ಅಳು ಕೇಳಿಸಿದೆ. ಹತ್ತಿರ ಹೋಗಿ ನೋಡಿದಾಗ ಬಟ್ಟೆಯಲ್ಲಿ ನವಜಾತ ಗಂಡು ಮಗು ಕಂಡುಬಂದಿದೆ. ಕೂಡಲೇ ಮಗುವನ್ನು ಸ್ಥಳೀಯ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅದೃಷ್ಟವಶಾತ್ ಮಗು ಆರೋಗ್ಯವಾಗಿತ್ತು.
ನಂತರ ಆರ್‌ಎಂಸಿ ಯಾರ್ಡ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಆಸ್ಪತ್ರೆಗೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಮಗುವಿನ ಪೋಷಕರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ 
ನವಜಾತ ಶಿಶುವನ್ನು ಸಾಕಲು ಹಲವರು ಮುಂದೆ ಬಂದಿದ್ದಾರೆ ಆದರೆ ಶಿವಕುಮಾರ್ ಅವರು ಮಗುವನ್ನು ಯಾರಿಗೂ ನೀಡದೇ ಮಕ್ಕಳ ಕಲ್ಯಾಣ ಇಲಾಖೆಗೆ ನೀಡಿದ್ದಾರೆ, ಕಾನೂನು ಪ್ರಕ್ರಿಯೆಗಳ ಪಾಲನೆ ಬಳಿಕ ಮಗು ದತ್ತು ಪ್ರಕ್ರಿಯೆಗೆ ಅವಕಾಶವಿದೆ ಎಂದು ಹೇಳಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT