ಡಾ. ಜಿ. ವಿ. ದಾಸೇಗೌಡ 
ರಾಜ್ಯ

ಮಂಡ್ಯ: ಹಿರಿಯ ಸಾಹಿತಿ, ಜಾನಪದ ತಜ್ಞ ಡಾ. ಜಿ. ವಿ. ದಾಸೇಗೌಡ ನಿಧನ

ಹಿರಿಯ ಸಾಹಿತಿ, ಜಾನಪದ ತಜ್ಞ ಡಾ. ಜಿ. ವಿ. ದಾಸೇಗೌಡ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಜಿ. ವಿ. ಡಿ ಎಂಬ ಕಾವ್ಯಾನಾಮದಿಂದ ಹೆಸರಾಗಿದ್ದ ಡಾ. ಜಿ. ವಿ. ದಾಸೇಗೌಡ ಜಾನಪದ ಕ್ಷೇತ್ರದಲ್ಲಿ ತಮ್ಮದೇ ಆದ ಹೆಗ್ಗುರುತುಗಳನ್ನು ಮೂಡಿಸಿದ್ದರು.

ಮಂಡ್ಯ : ಹಿರಿಯ ಸಾಹಿತಿ, ಜಾನಪದ ತಜ್ಞ  ಡಾ. ಜಿ. ವಿ. ದಾಸೇಗೌಡ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಜಿ. ವಿ. ಡಿ ಎಂಬ ಕಾವ್ಯಾನಾಮದಿಂದ ಹೆಸರಾಗಿದ್ದ ಡಾ. ಜಿ. ವಿ. ದಾಸೇಗೌಡ ಜಾನಪದ ಕ್ಷೇತ್ರದಲ್ಲಿ ತಮ್ಮದೇ ಆದ ಹೆಗ್ಗುರುತುಗಳನ್ನು ಮೂಡಿಸಿದ್ದರು. ಅವರ ನಿಧನದಿಂದಾಗಿ  ಜಾನಪದ ಕ್ಷೇತ್ರದ ಮತ್ತೊಂದು ಕೊಂಡಿ ಕಳಚಿದಂತಾಗಿದೆ.

 ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದರು. ಮಂಡ್ಯ ನಗರದ ಗುತ್ತಲುವಿನಲ್ಲಿ ಸಂಜೆ ಮೃತರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ನೆರವೇರಿತು.

ಪುತ್ರಿ, ಇಬ್ಬರು ಗಂಡು ಮಕ್ಕಳು ಸೇರಿ ಅಪಾರ ಸಾಹಿತ್ಯ ಅಭಿಮಾನಿಗಳನ್ನು ಅಗಲಿರುವ ದಾಸೇಗೌಡರು, ಜಾನಪದ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ 65ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಕನ್ನಡವಷ್ಟೇ ಅಲ್ಲದೇ, ಇಂಗ್ಲೀಷ್ , ಹಿಂದಿ, ಸಂಸ್ಕೃತ, ಪ್ರಾಕೃತ ಭಾಷೆಗಳನ್ನು ಬಲ್ಲ ಅವರು, ಕನ್ನಡ ಪ್ರಾಧ್ಯಾಪಕರಾಗಿ ಮಂಡ್ಯದ ಕೆ.ಎಂ. ದೊಡ್ಡಿ, ಮಡಿಕೇರಿ, ತುಮಕೂರು, ಮಂಡ್ಯ, ಸರ್ಕಾರಿ ಕಾಲೇಜುಗಳಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಅಂತಾರಾಷ್ಟ್ರೀಯ ಜಾನಪದ ಶಿಬಿರಗಳು, ವಿಚಾರ ಸಂಕಿರಣಗಳಲ್ಲಿ ಪ್ರೌಢ ಪ್ರಬಂಧಗಳನ್ನು ಮಂಡಿಸಿದ್ದಾರೆ.  ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಡಾ. ಜಿ. ವಿ. ಡಿ ಅವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಜಾನಪದ ಅಕಾಡೆಮಿ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಗೌರವಿಸಿ ಸನ್ಮಾನಿಸಿವೆ.
ಡಾ. ಜಿ. ವಿ. ದಾಸೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT