ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಭದ್ರಾ ಹಿನ್ನೀರಲ್ಲಿ ಮುಳುಗಿ ಇಬ್ಬರು ಯುವಕರು ನೀರುಪಾಲು

ಭದ್ರಾ ಹಿನ್ನೀರಿನಲ್ಲಿ ದಾಟುವ ವೇಳೆ ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರದಲ್ಲಿ ನಡೆದಿದೆ.

ಶೃಂಗೇರಿ: ಭದ್ರಾ ಹಿನ್ನೀರಿನಲ್ಲಿ ದಾಟುವ ವೇಳೆ ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರದಲ್ಲಿ ನಡೆದಿದೆ.
ಎನ್.ಆರ್.ಪುರ ತಾಲೂಕಿನ ಮೂರು ಕಣ್ಣಿನ ಸೇತುವೆ  ಸಮೀಪ ಸಂಭವಿಸಿದ ದುರಂತದಲ್ಲಿ ಸಂತೋಷ್ (19), ದಮ್ಮೂರ್ (24) ಎಂಬುವವರು ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಸಂತೋಷ್ ನೇಪಾಳ ಮೂಲದವರಾಗಿದ್ದು ಎನ್.ಆರ್. ಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇನ್ನೋರ್ವ ಮೃತ ದುರ್ದೈವಿ ದಮ್ಮೂರ್ ಸಂತೋಷ್ ಸಂಬಂಧಿಯಾಗಿದ್ದು ಈತ ಸಂತೋಷ್ ಮನೆಗೆ ಬಂದಿದ್ದನು.
ದಮ್ಮೂರ್ ನನ್ನು ಕರೆದುಕೊಂಡು ಸಂತೋಷ್ ಹಿನ್ನೀರನ್ನು ದಾಟುವ ವೇಳೆ ಆಯತಪ್ಪಿ ನೀರಿನಲ್ಲಿ ಬಿದ್ದಿದ್ದಾರೆ.  ಶನಿವಾರ ಸಂಜೆಈ ಘಟನೆ ನಡೆದಿದ್ದು ಮಾಹಿತಿ ಪಡೆದ ಪೋಲೀಸರು ಸ್ಥಳಕ್ಕಾಗಮಿಸಿಮೃತದೇಹದ ಹುಡುಕಾಟ ನಡೆಸಿದ್ದಾರೆ. ಕಡೆಗೆ ಇಂದು (ಭಾನುವಾರ) ಬೆಳಿಗ್ಗೆ ಎರಡೂ ಮೃತದೇಹಗಳು ಪತ್ತೆಯಾಗಿದೆ.
ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!