ಚಿತ್ರದುರ್ಗದಲ್ಲಿ ಭೀಕರ ಅಪಘಾತ, ಬೆಂಗಳೂರಿನ ಮೂವರು ವಿದ್ಯಾರ್ಥಿಗಳ ದುರ್ಮರಣ 
ರಾಜ್ಯ

ಚಿತ್ರದುರ್ಗದಲ್ಲಿ ಭೀಕರ ಅಪಘಾತ, ಬೆಂಗಳೂರಿನ ಮೂವರು ವಿದ್ಯಾರ್ಥಿಗಳ ದುರ್ಮರಣ

: ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ: ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಸೋಮವಾರ ನಸುಕಿನ ಜಾವ ಚಿತ್ರದುರ್ಗ ನಗರದ ಜಿಎಂಟಿ ವೃತ್ತದ ಸಮೀಪ ನಡೆದ ಅಪಘಾತದಲ್ಲಿ ಬೆಂಗಳೂರಿನವರಾದ ಕಾರ್ತಿಕ್ ಗೌಡ(20), ಹರ್ಷ(20), ಶ್ರೀನಿಧಿ(20)  ಎಂಬುವವರು ಸಾವನ್ನಪ್ಪಿದ್ದಾರೆ.
ಬೆಂಗಳೂರು ವಿಜಯಾ ಕಾಲೇಜಿನನಲ್ಲಿ ಕಾಮರ್ಸ್ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದ 13 ವಿದ್ಯಾರ್ಥಿಗಳು ಶುಕ್ರವಾರ ಗೋಕರ್ಣಕ್ಕೆ ಪ್ರವಾಸಕ್ಕೆಂದು ತೆರಳಿದ್ದಾರೆ. ಪ್ರವಾಸ ಮುಗಿಸಿ ವಾಪಾಸಾಗುವ ವೇಳೆ ಟಯರ್ ಬ್ಲಾಸ್ಟ್ ಆಗಿದ್ದ ಕಾರಣ ಟೀಟಿ ವಾಹನ ಕೆಟ್ಟು ನಿಂತಿತ್ತು. ಆ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿಯಾಗಿ ಟಿಟಿ ವಾಹನ ಸಮೀಪದಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿದೆ.  ಕೋಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಟ್ರಂಪ್ ಹತ್ಯೆಗೆ ಸಂಚು: ಇರಾನ್ ಜೊತೆಗೆ ನಂಟು ಹೊಂದಿದ ಪಾಕ್ ವ್ಯಕ್ತಿ ದೋಷಿ ಎಂದ ಅಮೆರಿಕ ನ್ಯಾಯಾಲಯ!

T20 ವಿಶ್ವಕಪ್ 2026: ಭಾರತದ ವಿರುದ್ಧ ಸ್ಫೋಟಕ ಶತಕ: Jacob Bethell ದಾಖಲೆಗಳ ಸುರಿಮಳೆ

Dhurandhar The Revenge trailer: ಪಾಕ್‌ನ ಭವಿಷ್ಯವನ್ನು ಭಾರತ ಬರೆಯಲಿದೆ! ಏನಿದು ರಣವೀರ್ ಸಿಂಗ್ ಶಪಥ?

T20 ವಿಶ್ವಕಪ್ 2026: '499 ರನ್, 34 ಸಿಕ್ಸರ್, 39 ಬೌಂಡರಿ': T20 ಇತಿಹಾಸದ ಅಪರೂಪದ ದಾಖಲೆ ಬರೆದ India vs England ಪಂದ್ಯ

SCROLL FOR NEXT