ಬೆಂಗಳೂರು: ಅಕ್ರಮ ಸಂಬಂಧ ವಿರೋಧಿಸಿದ್ದ ಪತ್ನಿಯ ಕೊಲೆ 
ರಾಜ್ಯ

ಬೆಂಗಳೂರು: ಅಕ್ರಮ ಸಂಬಂಧ ವಿರೋಧಿಸಿದ್ದ ಪತ್ನಿಯ ಕೊಲೆ

ಅನೈತಿಕ ಸಂಬಂಧಕ್ಕೆ ವಿರೋಧಿಸಿದ ಕಾರಣ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ದೊಡ್ಡತೊಗೂರಿನಲ್ಲಿ ನಡೆದಿದೆ.

ಬೆಂಗಳೂರು: ಅನೈತಿಕ ಸಂಬಂಧಕ್ಕೆ ವಿರೋಧಿಸಿದ ಕಾರಣ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ದೊಡ್ಡತೊಗೂರಿನಲ್ಲಿ ನಡೆದಿದೆ. ಶನಿವಾರ ರಾತ್ರಿ ನಡೆದಿದ್ದ ಈ ಪ್ರಕರಣದ ಆರೊಪಿ ರಮೇಶ್‌ ಬಾಬು (33) ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ರಮೇಶ್ ಕಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದು ಈತ ತನ್ನ ಪತ್ನಿ ಪ್ರಿಯಾಂಕಾ (26)ಳನ್ನು ಕೊಲೆ ಮಾಡಿದ್ದಾನೆ.
ಆಂಧ್ರ ಮೂಲದವರಾದ ಈ ದಂಪತಿ ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅವರಿಗೆ ಆರು ವರ್ಷದ ಹೆಣ್ಣು ಮಗುವೂ ಇದ್ದು ಅವಳನ್ನು ಪ್ರಿಯಾಂಕಾ ಪೋಷಕರ ಬಳಿ ಬಿಡಲಾಗಿತ್ತು. ಆರೋಪಿಗೆ ಬೇರೊಬ್ಬ ಮಹಿಳೆಯೊಡನೆ ಸಂಬಂಧವಿತ್ತು. ಇದನ್ನು ಅರಿತ ಪತ್ನಿ ಪ್ರಿಯಾಂಕಾ ಪತಿಯನ್ನು ವಿರೋಧಿಸಿದ್ದಾರೆ. ಇದಕ್ಕಾಗಿ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿದ್ದವು.
ಶನಿವಾರ ಸಹ ರಮೇಶ್ ಬಾಬು ಮದ್ಯಪಾನ ಮಾಡಿ ಮನೆಗೆ ಬಂದಿದ್ದನು. ಆಗ ಮತ್ತೆ ಪರಸ್ತ್ರೀ ಸಂಬಂಧದ ಕುರಿತು ಮಾತುಗಳು ಬಂದಾಗ ಇಬ್ಬರ ನಡುವುನ ಜಗಳ ತಾರಕಕ್ಕೇರಿದೆ.ಆ ಹಂತದಲ್ಲಿ ಆರೋಪಿಯು ಪ್ರಿಯಾಂಕಾ ಮುಖ, ಕುತ್ತಿಗೆ ಭಾಗದಲ್ಲಿ ಹಲ್ಲೆ ನಡೆಸಿದ್ದಾನೆ. ಪ್ರಿಯಾಂಕಾ ಮೂಗು, ಬಾಯಿಯಲ್ಲಿ ರಕ್ತಸ್ರಾವವಾದಾಗ ಆರೋಪಿ ರಮೇಶ್ ಆಕೆಯ ಕುತ್ತಿಗೆ ಹಿಸುಕಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಕೋಣೆಯಲ್ಲಿನ ಫ್ಯಾನ್ ಗೆ ಸೀರೆಯಿಂದ ಸಿಕ್ಕಿಸುವ ಮೂಲಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಬಿಂಬಿಸಲು ಹೊರಟಿದ್ದನು.
ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಜೋರಾಗಿ ಕೂಗಿದ ರಮೇಶ್ ಮಾತಿಗೆ ನೆರೆಹೊರೆಯವರು ಗಾಬರಿಗೊಂಡು ಪೋಲೀಸರಿಗೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಪೋಲೀಸರಿಗೆ ಶವದ ಮೇಲೆ ಗಾಯದ ಗುರುತು ಪತ್ತೆಯಾಗಿದೆ, ಅನುಮಾನಗೊಂಡ ಪೋಲೀಸರು ರಮೇಶ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕೊಲೆಯ ಸತ್ಯ ಬಹಿರಂಗವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT