ಬೆಂಗಳೂರು: ಅಕ್ರಮ ಸಂಬಂಧ ವಿರೋಧಿಸಿದ್ದ ಪತ್ನಿಯ ಕೊಲೆ 
ರಾಜ್ಯ

ಬೆಂಗಳೂರು: ಅಕ್ರಮ ಸಂಬಂಧ ವಿರೋಧಿಸಿದ್ದ ಪತ್ನಿಯ ಕೊಲೆ

ಅನೈತಿಕ ಸಂಬಂಧಕ್ಕೆ ವಿರೋಧಿಸಿದ ಕಾರಣ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ದೊಡ್ಡತೊಗೂರಿನಲ್ಲಿ ನಡೆದಿದೆ.

ಬೆಂಗಳೂರು: ಅನೈತಿಕ ಸಂಬಂಧಕ್ಕೆ ವಿರೋಧಿಸಿದ ಕಾರಣ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ದೊಡ್ಡತೊಗೂರಿನಲ್ಲಿ ನಡೆದಿದೆ. ಶನಿವಾರ ರಾತ್ರಿ ನಡೆದಿದ್ದ ಈ ಪ್ರಕರಣದ ಆರೊಪಿ ರಮೇಶ್‌ ಬಾಬು (33) ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ರಮೇಶ್ ಕಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದು ಈತ ತನ್ನ ಪತ್ನಿ ಪ್ರಿಯಾಂಕಾ (26)ಳನ್ನು ಕೊಲೆ ಮಾಡಿದ್ದಾನೆ.
ಆಂಧ್ರ ಮೂಲದವರಾದ ಈ ದಂಪತಿ ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅವರಿಗೆ ಆರು ವರ್ಷದ ಹೆಣ್ಣು ಮಗುವೂ ಇದ್ದು ಅವಳನ್ನು ಪ್ರಿಯಾಂಕಾ ಪೋಷಕರ ಬಳಿ ಬಿಡಲಾಗಿತ್ತು. ಆರೋಪಿಗೆ ಬೇರೊಬ್ಬ ಮಹಿಳೆಯೊಡನೆ ಸಂಬಂಧವಿತ್ತು. ಇದನ್ನು ಅರಿತ ಪತ್ನಿ ಪ್ರಿಯಾಂಕಾ ಪತಿಯನ್ನು ವಿರೋಧಿಸಿದ್ದಾರೆ. ಇದಕ್ಕಾಗಿ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿದ್ದವು.
ಶನಿವಾರ ಸಹ ರಮೇಶ್ ಬಾಬು ಮದ್ಯಪಾನ ಮಾಡಿ ಮನೆಗೆ ಬಂದಿದ್ದನು. ಆಗ ಮತ್ತೆ ಪರಸ್ತ್ರೀ ಸಂಬಂಧದ ಕುರಿತು ಮಾತುಗಳು ಬಂದಾಗ ಇಬ್ಬರ ನಡುವುನ ಜಗಳ ತಾರಕಕ್ಕೇರಿದೆ.ಆ ಹಂತದಲ್ಲಿ ಆರೋಪಿಯು ಪ್ರಿಯಾಂಕಾ ಮುಖ, ಕುತ್ತಿಗೆ ಭಾಗದಲ್ಲಿ ಹಲ್ಲೆ ನಡೆಸಿದ್ದಾನೆ. ಪ್ರಿಯಾಂಕಾ ಮೂಗು, ಬಾಯಿಯಲ್ಲಿ ರಕ್ತಸ್ರಾವವಾದಾಗ ಆರೋಪಿ ರಮೇಶ್ ಆಕೆಯ ಕುತ್ತಿಗೆ ಹಿಸುಕಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಕೋಣೆಯಲ್ಲಿನ ಫ್ಯಾನ್ ಗೆ ಸೀರೆಯಿಂದ ಸಿಕ್ಕಿಸುವ ಮೂಲಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಬಿಂಬಿಸಲು ಹೊರಟಿದ್ದನು.
ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಜೋರಾಗಿ ಕೂಗಿದ ರಮೇಶ್ ಮಾತಿಗೆ ನೆರೆಹೊರೆಯವರು ಗಾಬರಿಗೊಂಡು ಪೋಲೀಸರಿಗೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಪೋಲೀಸರಿಗೆ ಶವದ ಮೇಲೆ ಗಾಯದ ಗುರುತು ಪತ್ತೆಯಾಗಿದೆ, ಅನುಮಾನಗೊಂಡ ಪೋಲೀಸರು ರಮೇಶ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕೊಲೆಯ ಸತ್ಯ ಬಹಿರಂಗವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT