ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಎರಡು ಆನೆಗಳ ಮೃತದೇಹ ಪತ್ತೆ (ಸಂಗ್ರಹ ಚಿತ್ರ) 
ರಾಜ್ಯ

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಎರಡು ಆನೆಗಳ ಮೃತದೇಹ ಪತ್ತೆ

ಇಲ್ಲಿನ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಎರಡು ಆನೆಗಳ ಮೃತದೇಹಗಳು ಪತ್ತೆಯಾಗಿವೆ.

ಚಾಮರಾಜನಗರ: ಇಲ್ಲಿನ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಎರಡು ಆನೆಗಳ ಮೃತದೇಹಗಳು ಪತ್ತೆಯಾಗಿವೆ.
ಕಾವೇರಿ ಅಭಯಾರಣ್ಯದ ಹನೂರು ಅರಣ್ಯ ವಲಯದಲ್ಲಿ 55 ವರ್ಷ ಪ್ರಾಯದ ಆನೆಯ ಮೃತದೇಹ ಮೊದಲು ಪತ್ತೆಯಾಯಿತು. ಗಸ್ತಿನಲ್ಲಿದ್ದ ಸಿಬ್ಬಂದಿ ಅದನ್ನು ನೋಡಿದ್ದಾರೆ. ಸ್ಥಳಕ್ಕೆ ಎಸಿಎಫ್ ಅಂಕರಾಜ್ ಮತ್ತು ಇತರರು ಭೇಟಿ ನೀಡಿ ಪರಿಶೀಲಿಸಿದರು. ಡಾ.ಸಿದ್ದರಾಜು ನೇತೃತ್ವದ ತಂಡ ಮೃತದೇಹದ  ಮರಣೋತ್ತರ ಪರೀಕ್ಷೆ ನಡೆಸಿದ್ದು, ಇದು ಸ್ವಾಭಾವಿಕ ಸಾವು ಎಂದು ತಿಳಿಸಿದೆ.
40 ವರ್ಷ ಪ್ರಾಯದ ಮತ್ತೊಂದು ಆನೆಯ ಮೃತದೇಹ ಬಂಡೀಪುರ ನ್ಯಾಷನಲ್ ಪಾರ್ಕ್‌ನ ಮೂಲೆಹೊಳೆಯಲ್ಲಿ ಪತ್ತೆಯಾಗಿದೆ. ಮತ್ತೊಂದು ಆನೆಯೊಂದಿಗೆ ಜಗಳವಾಡಿದ ಪರಿಣಾಮ ಈ ಆನೆ ಸತ್ತಿರಬಹುದು ಎಂದು ಇದರ ಮರಣೋತ್ತರ ಪರೀಕ್ಷೆ ನಡೆಸಿದ ಡಾ.ನಾಗರಾಜ್‌ ತಿಳಿಸಿದ್ದಾರೆ. ಆನೆಯ ಹೊಟ್ಟೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿದ್ದವು ಎಂದು ಅವರು ಮಾಹಿತಿ ನೀಡಿದ್ದಾರೆ.
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎರಡು ಆನೆಗಳನ್ನು ಅರಣ್ಯದೊಳಗೆ ಸುಡಲಾಯಿತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್ ಜನರು ಅನಕ್ಷರಸ್ಥರು.. ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

48 ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

SCROLL FOR NEXT