ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಎರಡು ಆನೆಗಳ ಮೃತದೇಹ ಪತ್ತೆ (ಸಂಗ್ರಹ ಚಿತ್ರ) 
ರಾಜ್ಯ

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಎರಡು ಆನೆಗಳ ಮೃತದೇಹ ಪತ್ತೆ

ಇಲ್ಲಿನ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಎರಡು ಆನೆಗಳ ಮೃತದೇಹಗಳು ಪತ್ತೆಯಾಗಿವೆ.

ಚಾಮರಾಜನಗರ: ಇಲ್ಲಿನ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಎರಡು ಆನೆಗಳ ಮೃತದೇಹಗಳು ಪತ್ತೆಯಾಗಿವೆ.
ಕಾವೇರಿ ಅಭಯಾರಣ್ಯದ ಹನೂರು ಅರಣ್ಯ ವಲಯದಲ್ಲಿ 55 ವರ್ಷ ಪ್ರಾಯದ ಆನೆಯ ಮೃತದೇಹ ಮೊದಲು ಪತ್ತೆಯಾಯಿತು. ಗಸ್ತಿನಲ್ಲಿದ್ದ ಸಿಬ್ಬಂದಿ ಅದನ್ನು ನೋಡಿದ್ದಾರೆ. ಸ್ಥಳಕ್ಕೆ ಎಸಿಎಫ್ ಅಂಕರಾಜ್ ಮತ್ತು ಇತರರು ಭೇಟಿ ನೀಡಿ ಪರಿಶೀಲಿಸಿದರು. ಡಾ.ಸಿದ್ದರಾಜು ನೇತೃತ್ವದ ತಂಡ ಮೃತದೇಹದ  ಮರಣೋತ್ತರ ಪರೀಕ್ಷೆ ನಡೆಸಿದ್ದು, ಇದು ಸ್ವಾಭಾವಿಕ ಸಾವು ಎಂದು ತಿಳಿಸಿದೆ.
40 ವರ್ಷ ಪ್ರಾಯದ ಮತ್ತೊಂದು ಆನೆಯ ಮೃತದೇಹ ಬಂಡೀಪುರ ನ್ಯಾಷನಲ್ ಪಾರ್ಕ್‌ನ ಮೂಲೆಹೊಳೆಯಲ್ಲಿ ಪತ್ತೆಯಾಗಿದೆ. ಮತ್ತೊಂದು ಆನೆಯೊಂದಿಗೆ ಜಗಳವಾಡಿದ ಪರಿಣಾಮ ಈ ಆನೆ ಸತ್ತಿರಬಹುದು ಎಂದು ಇದರ ಮರಣೋತ್ತರ ಪರೀಕ್ಷೆ ನಡೆಸಿದ ಡಾ.ನಾಗರಾಜ್‌ ತಿಳಿಸಿದ್ದಾರೆ. ಆನೆಯ ಹೊಟ್ಟೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿದ್ದವು ಎಂದು ಅವರು ಮಾಹಿತಿ ನೀಡಿದ್ದಾರೆ.
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎರಡು ಆನೆಗಳನ್ನು ಅರಣ್ಯದೊಳಗೆ ಸುಡಲಾಯಿತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT