ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಫೇಸ್ ಬುಕ್ ನಕಲಿ ಸ್ನೇಹಿತರಿಂದ ವಂಚನೆ, ಚಿನ್ನಾಭರಣ ಕಳವು

ಫೇಸ್ ಬುಕ್ ನಲ್ಲಿ ಪರಿಚಯವಾದ ಅಪರಿತ ವ್ಯಕ್ತಿಗಳು ಬಿಯರ್ ನಲ್ಲಿ ಮತ್ತು ಬರುವ ಔಷಧ ಬೆರೆಸಿ ಪ್ರಜ್ಞೆ ತಪ್ಪಿಸಿ ವ್ಯಕ್ತಿಯೊಬ್ಬರ ಮನೆಯಿಂದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಬೆಂಗಳೂರು: ಫೇಸ್ ಬುಕ್ ನಲ್ಲಿ ಪರಿಚಯವಾದ  ಅಪರಿತ ವ್ಯಕ್ತಿಗಳು  ಬಿಯರ್ ನಲ್ಲಿ  ಮತ್ತು ಬರುವ ಔಷಧ ಬೆರೆಸಿ ಪ್ರಜ್ಞೆ ತಪ್ಪಿಸಿ  ವ್ಯಕ್ತಿಯೊಬ್ಬರ ಮನೆಯಿಂದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಬನಶಂಕರಿ ಮೂರನೇ ಹಂತದ ರಂಗಪ್ಪ ಲೇಔಟ್ ನ ರಮೇಶ್ ಹೆಚ್ ಹೀಗೆ ಚಿನ್ನಾಭರಣ ಕಳೆದುಕೊಂಡಿದ್ದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ.ಅಪರಿಚಿತರು ಫೇಸ್ ಬುಕ್ ನಲ್ಲಿ  ಒಂದು ತಿಂಗಳ ಹಿಂದೆ ಪರಿಚಿತರಾದರು ಎಂಬ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ಇನ್ಸೂರೆನ್ಸ್ ಕಂಪನಿಯಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿದ್ದ ರಮೇಶ್ ಅವರನ್ನು ನಂಬಿಸಿದ ಅಪರಿಚಿತರು ಏಪ್ರಿಲ್ 20 ರಂದು ಭೇಟಿ  ಮಾಡಲು ಹೇಳಿದ್ದಾರೆ. ಅಂದು ಸುಮಾರು 7 ಗಂಟೆ ಸುಮಾರಿನಲ್ಲಿ ಅನ್ನಪೂರ್ಣೇಶ್ವರಿ ಕಾನ್ವೇಷನ್ ಹಾಲ್  ಬಳಿಗೆ ಬಂದಿದ್ದು, ಮದ್ಯ ಸೇವಿಸಲು ನಿರ್ಧರಿಸಿದ್ದಾರೆ. ನಂತರ  ಬಿಯರ್ ನ್ನು ಖರೀದಿಸಿದ್ದು, ರಮೇಶ್ ಅವರ ಮನೆಗೆ ಹೋಗಿದ್ದಾರೆ. ರಮೇಶ್ ಅಡುಗೆ ಮನೆಯೊಳಗೆ ಹೋದಾಗ ಅಪರಿಚತರು ಲೋಟಗಳಲ್ಲಿ ಮತು ಬೆರಿಸಿದ್ದಾರೆ. ಇದನ್ನು ಕುಡಿದ ರಮೇಶ್ ಪ್ರಜ್ಞೆ ತಪ್ಪಿದ್ದಾನೆ.
ಏಪ್ರಿಲ್ 21 ರಂದು ಬೆಳಗ್ಗೆ 6-30ಕ್ಕೆ ಏದ್ದಾಗ ಅಪರಿಚಿತರು ನಾಪತ್ತೆಯಾಗಿದ್ದರು. ನಂತರ ಅಲ್ಮೇರಾ ಪರಿಶೀಲಿಸಿದಾಗ ಚಿನ್ನಾಭರಣ ಕಳವು ಆಗಿರುವುದು ಕಂಡುಬಂದಿತ್ತು. ಎರಡು ಚಿನ್ನದ ಚೈನ್ , ಎರಡು ಉಂಗುರ, ಕೆಲ ಬೆಳ್ಳಿ ವಸ್ತುಗಳು, ವಾಚ್, ಮೊಬೈಲ್ ಪೋನ್ ನೊಂದನ್ನು ಕಳ್ಳತನ ಮಾಡಲಾಗಿದೆ ಎಂದು ಅವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT