ರಾಜ್ಯ

ಹೃದಯವಿದ್ರಾವಕ: ದಸರಾ ಆನೆ ದ್ರೋಣ ನ ಕೊನೆಯ ಕ್ಷಣಗಳು ಕ್ಯಾಮರಾದಲ್ಲಿ ಸೆರೆ

Srinivas Rao BV
ಮೈಸೂರು: ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಆನೆಯ ಪಕ್ಕ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಜ್ಯೂನಿಯರ್ ದ್ರೋಣ  ಸಾವನ್ನಪ್ಪಿದೆ. 
37 ವರ್ಷದ ದ್ರೋಣ ನಾಗರಹೊಳೆ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುವ ಮತ್ತಿಗೋಡು ಆನೆ ಶಿಬಿರದ ತಿಥಿಮತಿಯಲ್ಲಿ ಬಾಯಾರಿಕೆಯಾಗಿ ನೀರು ಕುಡಿದ ಬಳಿಕ ಅಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದೆ. ನೀರು ಕುಡಿದಾದ ನಂತರ ಆನೆ ಕುಸಿದು ಬೀಳುವುದನ್ನು ಕಂಡ ಅರಣ್ಯ ಸಿಬ್ಬಂದಿ ಅದರತ್ತ ಧಾವಿಸಿ ಪ್ರಾಥಮಿಕ ಚಿಕಿತ್ಸೆ ನೀಡುವ ಪ್ರಯತ್ನಕ್ಕೆ ಮುಂದಾಗಿದ್ದರು. ಆದರೆ ಅಷ್ಟರಲ್ಲೇ ಆನೆ ಸಾವನ್ನಪ್ಪಿದೆ.  ಆನೆ ದ್ರೋಣ ಅಸ್ವಸ್ಥಗೊಂಡು ಕುಸಿದು ಬೀಳುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. 
SCROLL FOR NEXT