ಹರತಾಳ ಹಾಲಪ್ಪ 
ರಾಜ್ಯ

ಉಮಾಶ್ರೀ ವಿರುದ್ಧ ಮಾನನಷ್ಟ ಮೊಕದ್ದಮೆ: ಶಾಸಕ ಹರತಾಳ ಹಾಲಪ್ಪಗೆ ಕೋರ್ಟ್ ತರಾಟೆ

ಸ್ವತಃ ದೂರುದಾರರಾಗಿದ್ದರೂ, ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ ಸಾಗರ ಶಾಸಕ ಹರತಾಳ ಹಾಲಪ್ಪ ವಿರುದ್ಧ ಜನಪ್ರತಿನಿಧಿಗಳ...

ಬೆಂಗಳೂರು: ಸ್ವತಃ ದೂರುದಾರರಾಗಿದ್ದರೂ, ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ ಸಾಗರ ಶಾಸಕ ಹರತಾಳ ಹಾಲಪ್ಪ ವಿರುದ್ಧ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್‍ ಪ್ರಕರಣಗಳ ವಿಶೇಷ ನ್ಯಾಯಾಲಯ ಕಿಡಿಕಾರಿದೆ. ಜನಪ್ರತಿನಿಧಿಗಳಾಗಿ ನೀವೇ ನ್ಯಾಯಾಲಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಹೇಗೆ ಎಂದು ತರಾಟೆಗೆ ತೆಗೆದುಕೊಂಡಿದೆ.
ಐದು ವರ್ಷಗಳ ಹಿಂದೆ ತಮ್ಮನ್ನು 'ಅತ್ಯಾಚಾರಿ ' ಎಂದು ಕರೆದ ಮಾಜಿ ಸಚಿವೆ ಉಮಾಶ್ರೀ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದ ಹಾಲಪ್ಪ, ನಂತರ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರಿಗೆ ನೋಟಿಸ್‍ ಜಾರಿ ಮಾಡಿತ್ತು. ಶನಿವಾರ ಹಾಲಪ್ಪ ವಿಚಾರಣೆಗೆ ಬಂದಾಗ, ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ, ಐದು ವರ್ಷಗಳ ಕಾಲ ವಿಚಾರಣೆಗೆ ಏಕೆ ಹಾಜರಾಗಲಿಲ್ಲ ಎಂದು ಪ್ರಶ್ನಿಸಿದರು. ಅದಕ್ಕೆ ಹಾಲಪ್ಪ, ಪ್ರಕರಣದ ವಿಚಾರಣೆಗೆ ಹೈಕೋರ್ಟ್ ನ ತಡೆಯಾಜ್ಞೆ ಇತ್ತು ಎಂದು ಸಬೂಬು ಹೇಳಿದರು.
ಇದನ್ನೊಪ್ಪದ ನ್ಯಾಯಾಧೀಶರು, ವಿಚಾರಣೆಗೆ ತಡೆ ಇದ್ದರೆ, ದೂರುದಾರರಾದ ನಿಮಗೆ ವಿಚಾರಣೆಗೆ ಹಾಜರಾಗಲೇನು ಸಮಸ್ಯೆ. ದೂರುದಾರರಿಗೆ ಕೂಡ ನೋಟಿಸ್ ‍ನೀಡಿ ಕರೆಸಿಕೊಳ್ಳಬೇಕೆ. ಜನಪ್ರತಿನಿಧಿಗಳಾದ ನೀವೇ ಹೀಗೆ ನ್ಯಾಯಾಲಯಕ್ಕೆ ಅಗೌರವ ತೋರಿದರೆ ಹೇಗೆ ಎಂದು ಪ್ರಶ್ನಿಸಿದರು. 
ಈ ಸಂದರ್ಭದಲ್ಲಿ ಆರೋಪಿ ಉಮಾಶ್ರೀ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು. ಆದರೆ, ಹಾಲಪ್ಪ ಪರ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT