ಸುಂದರ ಮೂರ್ತಿ 
ರಾಜ್ಯ

ಬೆಂಗಳೂರು ಸೇರಿ ದಕ್ಣಿಣ ಭಾರತದ 7 ಕಡೆ ಉಗ್ರ ದಾಳಿ: ಹುಸಿ ಬಾಂಬ್ ಕರೆ ಮಾಡಿದ್ದ ಮಾಜಿ ಸೈನಿಕ ಬಂಧನ

ತಮಿಳುನಾಡು ರಾಮನಾಥಪುರಂ ಜಿಲ್ಲೆಯ ಪಂಬನ್ ಬ್ರಿಡ್ಜ್ ಗೆ ಉಗ್ರರು ಬಾಂಬ್ ಇಟ್ಟಿದ್ದಾರೆ, ಶ್ರೀಲಂಕಾ ದಾಳಿಯ ಬಳಿಕ ಭಾರತಕ್ಕೆ ನುಗ್ಗಿರುವ ಉಗ್ರರು ಇಲ್ಲಿನ ಏಳು ಪ್ರಮುಖ ನಗರಗಳ ಮೇಲೆ ದಾಳಿ....

ಬೆಂಗಳೂರು: ತಮಿಳುನಾಡು ರಾಮನಾಥಪುರಂ ಜಿಲ್ಲೆಯ ಪಂಬನ್ ಬ್ರಿಡ್ಜ್ ಗೆ ಉಗ್ರರು ಬಾಂಬ್ ಇಟ್ಟಿದ್ದಾರೆ, ಶ್ರೀಲಂಕಾ ದಾಳಿಯ ಬಳಿಕ ಭಾರತಕ್ಕೆ ನುಗ್ಗಿರುವ ಉಗ್ರರು ಇಲ್ಲಿನ ಏಳು ಪ್ರಮುಖ ನಗರಗಳ ಮೇಲೆ ದಾಳಿ ನಡೆಸಲಿದ್ದಾರೆ ಎಂದು ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಮಾಜಿ ಸೈನಿಕನನ್ನು ಬೆಂಗಳೂರು ಪೋಲೀಸರು ಶುಕ್ರವಾರ ಬಂಧಿಸಿದ್ದಾರೆ.
ಮಾಜಿ ಸೈನಿಕರಾಗಿದ್ದ ಸುಂದರ ಮೂರ್ತಿ (65) ಬಂಧಿತ ಆರೋಪಿಯಾಗಿದ್ದು ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಮಹಾರಾಷ್ಟ್ರ ಮತ್ತು ಪುದುಚೇರಿಗಳ ಪ್ರಮುಖ ನಗರಗಳಲ್ಲಿ ಉಗ್ರರು ದಾಳಿ ಮಾಡುತ್ತಾರೆ ಎಂದು ಆತ ಕರೆ ಮಾಡಿ ಹೇಳಿದ್ದನು. 
ತಮಿಳು ಹಾಗೂ ಹಿಂದಿ ಬಾಷೆಗಳಲ್ಲಿ ಮಾತನಾಡಿದ ಆರೋಪಿ ಬೆಂಗಳೂರು ಪೋಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿದ್ದಾನೆ. 
ಕರೆ ಸ್ವೀಕರಿಸಿದ್ದೇ ಜಾಗೃತವಾದ ಪೋಲೀಸರು ಆರೋಪಿ ಸುಂದರಮೂರ್ತಿಯನ್ನು ಬಂಧಿಸಿದ್ದಾರೆ. ಅವಲಹಳ್ಳಿ ಪೋಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು ಆತ ಅದೇ ಠಾಣಾ ವ್ಯಾಪ್ತಿಯ ಮುನಿವೆಂಕಟೇಶ್ವರ ಲೇಔಟ್ ನಿವಾಸಿಯಾಗಿದ್ದು ಅವನ ಮನೆಯಿಂದಲೇ ಬಂಧಿಸಲಾಗಿದೆ ಎಂದು ಪೋಲೀಸರು ವಿವರಿಸಿದ್ದಾರೆ.
"ಶ್ರೀಲಂಕಾದಲ್ಲಿ ನಡೆದಂತೆಯೇ ನಮ್ಮಲ್ಲಿಯೂ ಆಗಬಹುದು ಎಂಬ ಕಲ್ಪನೆಯಿಂದಹೀಗೆ ಕರೆ ಮಾಡಿದ್ದೆ " ಎಂಬುದಾಗಿ ಆರೋಪಿ ಸುಂದರ ಮೂರ್ತಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. 
ಇನ್ನು ಹುಸಿ ಕರೆ ಬಗೆಗೆ ಸಿಎಂ ಎಚ್.ಡಿ, ಕುಮಾರಸ್ವಾಮಿ ಸಹ ಡಿಜಿಪಿ ನೀಲಮಣಿ ಎನ್. ರಾಜು ಅವರಿಂದ ಮಾಹಿತಿ ಪಡೆಇದಿದ್ದು "ಹುಸಿ ಕರೆಯಾಗಿದ್ದರೂ ಸದಾ ಎಚ್ಚರವಾಗಿರಿ" ಎಂದು ಸೂಚನೆ ನಿಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT