ಹಿಂಡಲಗಾ ಜೈಲು 
ರಾಜ್ಯ

ಹಿಂಡಲಗಾ ಜೈಲಿನಿಂದ ಖೈದಿ ಪರಾರಿ: ಜೈಲರ್ ಸೇರಿ ನಾಲ್ವರ ಅಮಾನತು

ಹಿಂಡಲಗಾ ಜೈಲಿನಿಂಡ ಮರಣದಂಡನೆ ಶಿಕ್ಷೆಗೊಳಗಾಗಿದ್ದ ಖೈದಿ ಪರಾರಾಇಯಾದ ಘಟನೆ ಬೆಳಕಿಗೆ ಬಂದು ಒಂದು ದಿನದ ನಂತರ ಶುಕ್ರವಾರ ಜೈಲು ಇಲಾಖೆಯ ಹಿರಿಯ ಜೈಲರ್....

ಬೆಳಗಾವಿ: ಹಿಂಡಲಗಾ ಜೈಲಿನಿಂಡ ಮರಣದಂಡನೆ ಶಿಕ್ಷೆಗೊಳಗಾಗಿದ್ದ ಖೈದಿ ಪರಾರಾಇಯಾದ ಘಟನೆ ಬೆಳಕಿಗೆ ಬಂದು ಒಂದು ದಿನದ ನಂತರ ಶುಕ್ರವಾರ ಜೈಲು ಇಲಾಖೆಯ ಹಿರಿಯ ಜೈಲರ್, ಮುಖ್ಯ ವಾರ್ಡನ್ ಮತ್ತು ಇಬ್ಬರು ಕಾನ್ಸ್ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ತಮಿಳುನಾಡಿನ ಸೇಲಂ ಮೂಲದ ಮುರುಗನ್ ಎಂದು ಗುರುತಿಸಲ್ಪಟ್ಟ ಆರೋಪಿ 2017ರಲ್ಲಿ ಮರಣದಂಡನೆಗೆ ಗುರಿಯಾಗಿ ಹಿಂಡಲಗಾ ಜೈಲಿನಲ್ಲಿದ್ದನು. ಚಾಮರಾಜನಗರದಲ್ಲಿ ಐವರ ಹತ್ಯೆ ಪ್ರಕರಣದಲ್ಲಿ ಆತನಿಗೆ ಮರಣದಂಡನೆ ಶಿಕ್ಷೆಯಾಗಿತ್ತು.
ಪ್ರಾಥಮಿಕ ತನಿಖೆಯ ವೇಳೆ ಜೈಲಿನಿಂದ ತಪ್ಪಿಸಿಕೊಳ್ಳಲು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡ ಮುರುಗನ್‌ ಗೆ ಇನ್ನೂ ಮೂವರು ಖೈದಿಗಳು ಸಹಾಯ ಮಾಡಿದ್ದರು ಎನ್ನುವುದು ತಿಳಿದುಬಂದಿದೆ.
"ಜೈಲಿನ ಸಿಬ್ಬಂದಿಯ ನಿರ್ಲಕ್ಷವೇ ಈ ಘಟನೆಗೆ ಕಾರಣವಾಗಿದೆ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ.ಈ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.ಕಾರಾಗೃಹದ ಮುಖ್ಯ ಅಧೀಕ್ಷ ಟಿ.ಪಿ.ಶೇಷ ತಿಳಿಸಿದ್ದಾರೆ.  ಮುರುಗನ್‌ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT