ಗದಗ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಕೊಂದು ಯುವಕ ನೇಣಿಗೆ ಶರಣು 
ರಾಜ್ಯ

ಗದಗ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಕೊಂದು ಯುವಕ ನೇಣಿಗೆ ಶರಣು

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ಓರ್ವನ ಹತ್ಯೆಗೆ ಕಾರಣವಾಗಿದ್ದು ಹತ್ಯೆ ನಡೆಸಿದ ಆರೋಪಿ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ಓರ್ವನ ಹತ್ಯೆಗೆ ಕಾರಣವಾಗಿದ್ದು ಹತ್ಯೆ ನಡೆಸಿದ ಆರೋಪಿ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಗದಗ ಗಜೇಂದ್ರಗಡ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ವಿಕಾಸ್‌ ದೊಡ್ಡಮೇಟಿ (18)  ಹತ್ಯೆಗೀಡಾದ ದುರ್ದೈವಿ.ಈತನನ್ನು ಶೌಕತ್ ಅಲಿ ಕೊಪ್ಪಳ (35) ಎಂಬುವವನು ಕೊಡಲಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪಿಯುಸಿ ಪರೀಕ್ಷೆ ಬರೆದಿದ್ದ ವಿಕಾಸ್ ಸೋಮವಾರ ಸಿಇಟಿ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಇದೀಗ ಸ್ನೇಹಿತನಿಂದಲೇ ಹತ್ಯೆಯಾಗಿದ್ದಾನೆ.
ಬೆಳಗಿನ ಜಾವ ಬಹಿರ್ದೆಶೆಗೆ ತೆರಳಿದ್ದ ವೇಳೆ ವಿಕಾಸ್ ಹಾಗೂ ಶೌಕತ್  ನಡುವೆ ಜಗಳವಾಗಿದೆ. ಆ ವೇಳೆ ಜಗಳ ತಾರಕಕ್ಕೆ ಹೋಗಿದ್ದು ವಿಕಾಸ್ ಗೆ ಕೊಡಲಿಯಿಂದ ಹೊಡೆದು ಶೌಕತ್  ಹಲ್ಲೆ ನಡೆಸಿದ್ದು ಹಲ್ಲೆಯಿಂದಾಗಿ ವಿಕಾಸ್ ನ ಕುತ್ತಿಗೆಗೆ ಬಲವಾದ ಏತಾಗಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ/ ಹತ್ಯೆ ನಡೆಸಿದ ಶೌಕತ್  ತಕ್ಷಣ ಸ್ನೇಹಿತನ ಶವ ಕಂಡು ಭಯವಾಗಿ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಸಂಬಂಧ ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT